Advertisement

ಎಲ್ಲರೂ ಒಟ್ಟಾಗಿ ಶಿರಾ ಉಪ ಚುನಾವಣೆ ಎದುರಿಸಲಿದ್ದೇವೆ: ಡಿಕೆಶಿ

12:45 PM Sep 16, 2020 | Mithun PG |

ಬೆಂಗಳೂರು: ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ.

Advertisement

ನಂತರ ಮಾತನಾಡಿದ ಡಿ.ಕೆ ಶಿವಕುಮಾರ್, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ಮಾಡಿದ್ದೇವೆ. ಶಿರಾ ಉಪಚುನಾವಣೆಯನ್ನು ಪರಮೇಶ್ವರ್ ನೇತೃತ್ವತ್ವದಲ್ಲಿ ನಡೆಸಲಾಗುವುದು. ಇವರಿಗೆ ರಾಜಣ್ಣ ಕೋ-ಚೇರ್ಮನ್ ಆಗಿ ಸಾಥ್ ನೀಡಲಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿಯೇ ಚುನಾವಣೆ ಎದುರಿಸಲಿದ್ದೇವೆ.

ಪಕ್ಷದ ಅಭ್ಯರ್ಥಿಯಾಗಿ ಜಯಚಂದ್ರ ಕಣಕ್ಕೀಳಿಯಲಿದ್ದಾರೆ. ರಾಜಣ್ಣ ಅವರೇ ಜಯಚಂದ್ರ ಹೆಸರು ಸೂಚಿಸಿದ್ದು, ಎಲ್ಲರ ಅಭಿಪ್ರಾಯವನ್ನು ಕೂಡ ಪಡೆಯಲಾಗಿದೆ. ಪಕ್ಷದ ವರಿಷ್ಠರಿಗೂ ಇದನ್ನೇ ಕಳುಹಿಸಿಕೊಡಲಿದ್ದೇವೆ.

ಇಂದಿನಿಂದಲೇ ಚುನಾವಣೆ ಕಾರ್ಯ ಆರಂಭವಾಗಲಿದ್ದು, ನಾವೆಲ್ಲರೂ ಜಯಚಂದ್ರ ಅವರಿಗೆ ಸಾಥ್ ನೀಡುತ್ತೇವೆ. ಕ್ಷೇತ್ರದ ಹಿತದೃಷ್ಠಿಯಿಂದ ಗೆಲ್ಲಲು ನಾವೆಲ್ಲರೂ ಶತ ಪ್ರಯತ್ನ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ ನೀಡಿದ್ದಾರೆ.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.  ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ. ಪರಮೇಶ್ವರ ಮತ್ತಿತರರು ಪಾಲ್ಗೊಂಡಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next