Advertisement

ಉತ್ತರಪ್ರದೇಶ: ದುಷ್ಕರ್ಮಿಗಳ ಗುಂಡಿಗೆ ಬಿಎಸ್ಪಿ ಮುಖಂಡ ಶಮಿ ಬಲಿ

11:53 AM Mar 20, 2017 | Sharanya Alva |

ಲಕ್ನೋ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಎಸ್ಪಿ ಮುಖಂಡ ಮೊಹಮ್ಮದ್ ಶಮಿಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದ ಘಟನೆ ಉತ್ತರಪ್ರದೇಶದ ಅಲಹಾಬಾದ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. 

Advertisement

ದುಷ್ಕರ್ಮಿಗಳು ಪರಾರಿಯಾಗಿದ್ದು, ಅವರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೊಹಮ್ಮದ್ ಶಮಿ ಅವರು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಹಂತಕರು ಗುಂಡಿಟ್ಟು ಹತ್ಯೆಗೈದಿದ್ದಾರೆ.

ಶಮಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ. ಘಟನೆಯ ನಂತರ ಉದ್ರಿಕ್ತ ಜನರು ಅಲಹಾಬಾದ್, ಫೈಜಾಬಾದ್ ಗಡಿ ರಸ್ತೆಯನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಿದರು.  ಮತ್ತೊಂದೆಡೆ ನೂತನವಾಗಿ ಅಸ್ತಿತ್ವಕ್ಕೆ ಬಂದ ಬಿಜೆಪಿ ನೇತೃತ್ವದ ಯೋಗಿ ಆದಿತ್ಯನಾಥ್ ಸರ್ಕಾರದ ಕಾರ್ಯವೈಖರಿ ಬಗ್ಗೆ ಜನರು ಅಸಮಾಧಾನವ್ಯಕ್ತಪಡಿಸಿರುವುದಾಗಿ ಎಬಿಪಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next