Advertisement

ರಾಮಮಂದಿರ ಭೂಮಿ ಪೂಜೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

06:28 PM Jul 24, 2020 | Nagendra Trasi |

ಪ್ರಯಾಗ್ ರಾಜ್: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5ರಂದು ನಡೆಯಲಿರುವ ಭೂಮಿ ಪೂಜೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ (ಜುಲೈ24-2020) ವಜಾಗೊಳಿಸಿದೆ.

Advertisement

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನೆರವೇರಿಸಲಿರುವ ಶಂಕುಸ್ಥಾಪನೆಯ ಭೂಮಿ ಪೂಜೆ ಕೇಂದ್ರ ಸರ್ಕಾರದ ಕೋವಿಡ್ 19 ಸಂಕಷ್ಟದ ಅನ್ ಲಾಕ್ 2.0ನ ನಿಯಮಾವಳಿಯ ಉಲ್ಲಂಘನೆಯಾಗಲಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಇದೊಂದು ಕಾಲ್ಪನಿಕ ಆಧಾರದ ಅರ್ಜಿಯಾಗಿದೆ ಎಂದು ಹೇಳಿದೆ. ದೆಹಲಿ ಮೂಲದ ವಕೀಲ ಸಾಕೇತ್ ಗೋಖಲೆ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಈ ಸಮಾರಂಭದಲ್ಲಿ ಸುಮಾರು 200 ಮಂದಿ ಭಾಗವಹಿಸುವ ಸಾಧ್ಯತೆ ಇದ್ದು, ಇದು ಕೇಂದ್ರ ಸರ್ಕಾರದ ನಿಯಮದ ಉಲ್ಲಂಘನೆಯಾಗಲಿದೆ ಎಂದು ಅರ್ಜಿಯಲ್ಲಿ ವಾದಿಸಿದ್ದರು.

ಹೀಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚು ಮಂದಿ ಸೇರುವುದರಿಂದ ಕೋವಿಡ್ 19 ವೈರಸ್ ಹರಡುವ ಸಾಧ್ಯತೆ ಹೆಚ್ಚಿರುವುದಾಗಿ ತಿಳಿಸಿದ್ದರು. ಗೋಖಲೆ ವಿದೇಶಗಳಲ್ಲಿ ಹಲವಾರು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಇವರೊಬ್ಬ ಸಾಮಾಜಿಕ ಕಾರ್ಯಕರ್ತ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next