Advertisement

ದುಂದುವೆಚ್ಚ ಆರೋಪ; ಎಸ್.ಮೂರ್ತಿ ನಿವಾಸಗಳ ಮೇಲೆ ಎಸಿಬಿ ದಾಳಿ, ಪರಿಶೀಲನೆ

09:45 AM Oct 04, 2019 | Nagendra Trasi |

ಬೆಂಗಳೂರು: ದಂದು ವೆಚ್ಚ ಆರೋಪ ಹಾಗೂ ಸರ್ಕಾರದ ಮಹತ್ವದ ಸೀಲ್(ಮುದ್ರೆ)ಗಳ ದುರುಪಯೋಗದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್.ಮೂರ್ತಿ ನಿವಾಸಗಳ ಮೇಲೆ ಗುರುವಾರ ಎಸಿಬಿ ದಾಳಿ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಎಸ್.ಮೂರ್ತಿ ಸೀಲ್ ಗಳ ದುರುಪಯೋಗಪಡಿಸಿಕೊಂಡಿರುವ ಆರೋಪ ಬಂದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು.

ಗುರುವಾರ ಬೆಳಗ್ಗೆ ಸದಾಶಿವನಗರ, ಆರ್ ಟಿ ನಗರದ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಕೊಡಗು ಬಳಿಯ ಕಾಫಿ ತೋಟದ ಮನೆಯಲ್ಲೂ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next