Advertisement

ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ನಾಮಪತ್ರ ಸಲ್ಲಿಕೆ

02:12 AM Mar 26, 2019 | Team Udayavani |

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಸಚಿವರಾದ ಕೆ.ಜೆ. ಜಾರ್ಜ್‌, ಡಾ| ಜಯಮಾಲಾ ಮೊದಲಾದವರು ಜತೆಗಿದ್ದರು.

Advertisement

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯ ಬಳಿಕ ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಕೆ ತೆರಳಿದ ಪ್ರಮೋದ್‌ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ದೇವಸ್ಥಾನ, ಇಗರ್ಜಿ, ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಬನ್ನಂಜೆ ನಾರಾಯಣಗುರುಗಳ ಮಂದಿರಕ್ಕೂ ಭೇಟಿ ನೀಡಿದ್ದು, ನಾರಾಯಣಗುರುಗಳ “ಒಂದೇ ಧರ್ಮ- ಒಂದೇ ಜಾತಿ’ ತಣ್ತೀದಲ್ಲಿ ಕಾರ್ಯನಿರ್ವಹಿಸುತ್ತೇನೆ. ರೈತರ, ಮಹಿಳೆಯರ, ಮೀನುಗಾರರ ಸಮಸ್ಯೆಗಳನ್ನು ಬಗೆ ಹರಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ.
– ಪ್ರಮೋದ್‌ ಮಧ್ವರಾಜ್‌

Advertisement

Udayavani is now on Telegram. Click here to join our channel and stay updated with the latest news.

Next