Advertisement

ಮೈತ್ರಿ ಸರ್ಕಾರ ಪತನಕ್ಕೆ ಸಿದ್ದು ಫ‌ಂಡಿಂಗ್‌: ಉಮೇಶ ಕತ್ತಿ

12:30 AM Jan 01, 2019 | Team Udayavani |

ಹುಕ್ಕೇರಿ: ರಾಜ್ಯ ಸಮ್ಮಿಶ್ರ ಸರ್ಕಾರ ಜ.14ರೊಳಗೆ ಪತನವಾಗಲಿದೆ. ಕಾಂಗ್ರೆಸ್‌-ಜೆಡಿಎಸ್‌ ನಾಯಕರ ನಡುವಿನ ತಿಕ್ಕಾಟ ತಾರಕಕ್ಕೇರಿರುವುದೇ ಇದಕ್ಕೆ ಪ್ರಮುಖ ಕಾರಣ. ಸರ್ಕಾರ ಉರುಳಿಸಲು ಸಿದ್ದರಾಮಯ್ಯ ಫ‌ಂಡಿಂಗ್‌ ಮಾಡುತ್ತಿದ್ದಾರೆ ಎಂದು ಶಾಸಕ ಉಮೇಶ ಕತ್ತಿ ಆರೋಪಿಸಿದರು. 

Advertisement

ಮಾಜಿ ಸಚಿವ ರಮೇಶ ಜಾರಕಿಹೊಳಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿಯಾದ ವಿಷಯದ ಬಗ್ಗೆ ನಮ್ಮ ಪಕ್ಷದ ಯಾವುದೇ ಮುಖಂಡರಿಗೆ ಮಾಹಿತಿ ಇಲ್ಲ. ಜಾರಕಿಹೊಳಿ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ವಿಷಯ ಸಿದ್ದರಾಮಯ್ಯ ಅವರಿಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಿದರು.

ಬಿಜೆಪಿಯಿಂದ ಸರ್ಕಾರ ಅಸ್ಥಿರಗೊಳಿಸುವ ಯಾವುದೇ ಪ್ರಯತ್ನ ನಡೆದಿಲ್ಲ. ಇಲ್ಲಸಲ್ಲದ ಆರೋಪವನ್ನು ಬಿಜೆಪಿ ಮೇಲೆ ಹೊರಿಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next