Advertisement

ನಿರೀಕ್ಷೆಗೂ ಮುನ್ನ ಮೈತ್ರಿ ಸರ್ಕಾರ ಉರುಳುತ್ತೆ: ಈಶ್ವರಪ್ಪ ಭವಿಷ್ಯ

03:05 PM May 20, 2018 | |

ಶಿವಮೊಗ್ಗ: ‘ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಹೆಚ್ಚು ಆಯಸ್ಸಿಲ್ಲ,ಶಾಸಕರ ನಡುವಿನ ಅತೃಪ್ಪಿ ಸ್ಫೋಟಗೊಳ್ಳಲಿದ್ದು  ನಿರೀಕ್ಷೆಗೂ ಮುನ್ನ ಸರ್ಕಾರ ಉರುಳುತ್ತೆ’ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. 

Advertisement

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ‘ಕಾಂಗ್ರೆಸ್‌ ಪಕ್ಷವನ್ನು ಜನ ತಿರಸ್ಕರಿಸಿದರೂ ಜೆಡಿಎಸ್‌ ಜೊತೆ ಅಪವಿತ್ರ ಮೈತ್ರಿ ಮಾಡಿಕೊಂಡು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಸಚಿವ ಸ್ಥಾನಗಳ ಬಗೆಗ ಕಾಂಗ್ರೆಸ್‌ -ಜೆಡಿಎಸ್‌ ಶಾಸಕರಲ್ಲಿ ಬಹಳಷ್ಟು ಅತೃಪ್ತಿ ಇದೆ’ ಎಂದರು. 

‘ಕುಚೋದ್ಯ ರಾಜಕಾರಣವನ್ನು ರಾಜ್ಯದ ಜನರು ಒಪ್ಪುವುದಿಲ್ಲ. ಆದಷ್ಟು ಬೇಗ ಬಿಜೆಪಿ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next