Advertisement

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮೈತ್ರಿ

11:30 PM May 08, 2019 | Team Udayavani |

ಬೆಂಗಳೂರು: ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಬಲ ಕುಗ್ಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗಳು ಆಯ್ದ ಕಡೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಜತೆ ಚರ್ಚಿಸಿದರು.

Advertisement

ಗೃಹ ಕಚೇರಿ ಕೃಷ್ಣಾಗೆ ಬುಧವಾರ ಆಗಮಿಸಿದ್ದ ದಿನೇಶ್‌ ಗುಂಡೂರಾವ್‌ ಹಾಗೂ ಪರಮೇಶ್ವರ್‌ ಜತೆ ಸಿಎಂ ಈ ಕುರಿತು ಮಾತುಕತೆ ನಡೆಸಿದರು. ಎಲ್ಲೆಲ್ಲಿ ಚುನಾವಣೆ ನಡೆಯಲಿದೆಯೋ ಅಲ್ಲಿನ ಜಿಲ್ಲಾ ಹಾಗೂ ತಾಲೂಕು ಘಟಕಗಳ ಅಧ್ಯಕ್ಷರ ಜತೆ ಮಾತನಾಡಿ, ಸಾಧ್ಯವಿರುವ ಕಡೆ ಹೊಂದಾಣಿಕೆ ಅಭ್ಯರ್ಥಿ ಹಾಕುವ ಬಗ್ಗೆ ಸೂಚನೆ ನೀಡಬೇಕು ಎಂಬ ಬಗ್ಗೆ ಚರ್ಚೆಯಾಯಿತು ಎಂದು ಹೇಳಲಾಗಿದೆ.

63 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಕಡೆ ಕಾಂಗ್ರೆಸ್‌-ಜೆಡಿಎಸ್‌ ಸಾಧ್ಯವಾದರೆ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಜಿಲ್ಲಾ ಘಟಕಗಳಿಗೆ ಅಧಿಕಾರ ನೀಡೋಣ ಎಂಬ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ.

ಈ ಸಂಬಂಧ ಜೆಡಿಎಸ್‌ ಜಿಲ್ಲಾ ಘಟಕಗಳ ಸಭೆ ನಡೆಯಲಿದೆ. ಕಾಂಗ್ರೆಸ್‌ ಸಹ ಜಿಲ್ಲಾ ಘಟಕಗಳ ಜತೆ ಸಭೆ ನಡೆಸಲಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ಸ್ಥಳೀಯ ಮಟ್ಟದಲ್ಲಿನ ಪರಿಸ್ಥಿತಿ ಬಗ್ಗೆಯೂ ಜಿಲ್ಲಾ ಘಟಕಗಳಿಂದ ವರದಿ ತರಿಸಿಕೊಳ್ಳಲು ರಡೂ ಪಕ್ಷಗಳು ನಿರ್ಧರಿಸಿವೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next