Advertisement

ಜೆಡಿಎಸ್‌ ಜತೆ ಮೈತ್ರಿ ಖಚಿತ: ಈಶ್ವರ ಖಂಡ್ರೆ

06:25 AM Aug 06, 2018 | Team Udayavani |

ಬೀದರ: ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಎರಡೂ ಪಕ್ಷಗಳು ನಿರ್ಧರಿಸಿವೆ. ಅಲ್ಲದೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಥಳೀಯವಾಗಿ ಹೊಂದಾಣಿಕೆ ಸಾಧ್ಯತೆ ಇದ್ದರೆ ಮೈತ್ರಿ ಮಾಡಿಕೊಳ್ಳಬಹುದೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಈಶ್ವರ ಖಂಡ್ರೆ ತಿಳಿಸಿದ್ದಾರೆ.

Advertisement

ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಡಿಸೆಂಬರ್‌ನಲ್ಲಿ ಲೋಕಸಭೆಗೆ ಚುನಾವಣೆ ಎದುರಾಗುವ ಸಾಧ್ಯತೆಗಳಿದ್ದು, ರಾಜ್ಯದಲ್ಲಿನ ಒಟ್ಟು 28 ಸ್ಥಾನಗಳ ಪೈಕಿ ಟಾರ್ಗೆಟ್‌ 25 ನಿಗದಿಗೊಳಿಸಿ ಚುನಾವಣೆ ತಂತ್ರ ರಚಿಸಲಾಗುತ್ತಿದೆ. ಜೆಡಿಎಸ್‌ ಜತೆಗಿನ ಮೈತ್ರಿ ಸಂಬಂಧ ಸೀಟುಗಳ ಹಂಚಿಕೆ ಇನ್ನಷ್ಟೇ ಬಗೆಹರಿಯಬೇಕಿದೆ. ಈ ಸಂಬಂಧ ಎರಡೂ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರು ಆ.13ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ರಾಹುಲ್‌ ಪ್ರವಾಸವನ್ನು ಚುನಾವಣೆ ಪ್ರಚಾರದ ಭಾಗವಾಗಿಯೂ ಪರಿಗಣಿಸಬಹುದು. ದೇಶದಲ್ಲಿ ಕಾಂಗ್ರೆಸ್‌ ಮತ್ತೆ ಅಧಿ ಕಾರಕ್ಕೆ ಬರಬೇಕು. ರಾಹುಲ್‌ ಪ್ರಧಾನಿಯಾಗಬೇಕು ಎಂಬ ನಿಟ್ಟಿನಲ್ಲಿ ಪಕ್ಷದ ಪರವಾಗಿ ಎಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next