Advertisement

ದಲಿತ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನ ಹಂಚಿಕೆ: ಕ್ರಮಕ್ಕೆ ಸಿಎಂ ಸೂಚನೆ

08:45 PM Oct 29, 2022 | Team Udayavani |

ಬೆಂಗಳೂರು: ದಲಿತ ಉದ್ದಿಮೆದಾರರಿಗೆ 2009ರಲ್ಲಿ ನಿಗದಿ ಪಡಿಸಿದ ಮೀಸಲಾತಿಯಂತೆ ಕೈಗಾರಿಕಾ ನಿವೇಶನ ಹಂಚಿಕೆಯಲ್ಲಿನ ಕೊರತೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ನಿಯೋಗ ಭೇಟಿ ಮಾಡಿ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದ ಬಳಿಕ ಮಾತನಾಡಿದ ಅವರು, ದಲಿತ ಉದ್ದಿಮೆದಾರರಿಗೆ 2009ರಲ್ಲಿ ನಿಗದಿ ಪಡಿಸಿದ ಮೀಸಲಾತಿಯಂತೆ ಕೈಗಾರಿಕಾ ನಿವೇಶನ ಹಂಚಿಕೆಯಲ್ಲಿನ ಕೊರತೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಲಾಗಿದೆ ಎಂದು ಹೇಳಿದರು.

ಇದಕ್ಕಾಗಿ ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹಾಗೂ ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಜೊತೆಯಾಗಿ ಲ್ಯಾಂಡ್‌ ಆಡಿಟ್‌ ಮಾಡಿ ವರದಿ ಸಲ್ಲಿಸಿ, ಕೊರತೆಯಾಗಿರುವ ಭೂಮಿ ಹಂಚಿಕೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next