Advertisement

Lok Sabha Election: ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಎಚ್‌ಡಿಕೆ

12:31 AM Mar 14, 2024 | Team Udayavani |

ಹಾಸನ: “ಕೈ ಮುಗಿದು ಮನವಿ ಮಾಡುತ್ತೇನೆ, ತಪ್ಪು ತಿದ್ದಿಕೊಳ್ಳಲು ಒಂದು ಅವಕಾಶ ನೀಡಿ’ ಎಂದು ಗದ್ಗದಿತರಾಗಿ ಎಚ್‌.ಡಿ. ಕುಮಾರಸ್ವಾಮಿ ಕೋರಿದ್ದಾರೆ.

Advertisement

ಹಾಸನದಲ್ಲಿ ಮಾತನಾಡಿದ ಅವರು, ನಾನು ಕೈ ಜೋಡಿಸಿ ಮನವಿ ಮಾಡಲು ಬಂದಿದ್ದೇನೆ. ನಿಮ್ಮ ಎದುರು ಹುಟ್ಟಿದ ಮಕ್ಕಳು ನಾವು. ನಾವು ದಾರಿ ತಪ್ಪಿದ್ದರೆ ತಿದ್ದಿಕೊಳ್ಳಲು ಅವಕಾಶ ಕೊಡಲು ಸಾಧ್ಯವಿಲ್ಲವೇ ಎಂದು ಕೇಳಲು ಬಂದಿದ್ದೇನೆ. ನಮ್ಮಿಂದ ಕೆಲವು ಲೋಪಗಳು ಆಗಿರಬಹುದು. ನಿಮ್ಮ ಮನಸ್ಸಿನಲ್ಲಿ ಆಗಿರುವ ನೋವನ್ನು ನೀವು ನಮ್ಮೆದುರು ಹೇಳಲ್ಲ. ಹೇಳಿದರೆ ನಮಗೆ ನೋವಾಗುತ್ತದೆ ಎಂದು ಸುಮ್ಮನಾಗಿದ್ದೀರಿ. ಆದರೆ, ನೀವು ಅದನ್ನು ಮನಸ್ಸಿನಲ್ಲೇ ಇಟ್ಟುಕೊಂಡರೆ ಮುಂದೆ ಏನಾಗುತ್ತೆ ಎನ್ನುವುದು ಗೊತ್ತಿದೆ. ಈ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್‌ ಅಲ್ಲ, ಕುಮಾರಸ್ವಾಮಿ ಎಂದು ಭಾವಿಸಿ ತೀರ್ಮಾನ ಮಾಡಿ. ಈ ಜಿಲ್ಲಗೆ ಕಿಂಚಿತ್ತಾದಾರೂ ಕುಮಾರ ಸ್ವಾಮಿ ಏನಾದರೂ ಒಳ್ಳೆಯದು ಮಾಡಿದ್ದಾನೆ ಎಂದಿದ್ದರೆ ನನ್ನಲ್ಲಿ ಪ್ರಜ್ವಲ್‌ರನ್ನು ಕಾಣಿ. ಯಾವುದೇ ಅಪಪ್ರಚಾರಕ್ಕೆ ಬಲಿಯಾಗಬೇಡಿ ಎಂದು ಮನವಿ ಮಾಡಿದರು.

ಕೋಲಾರ, ಹಾಸನ, ಮಂಡ್ಯ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಡಲಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಹಾಸನದಲ್ಲಿ ಬುಧವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಇನ್ನೂ ಒಂದೆರೆಡು ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಸಿದ್ಧವಿದ್ದರೂ ನಮಗೆ ಸಂಪನ್ಮೂಲದ ಕೊರತೆ ಇದೆ. ಹಾಗಾಗಿ ಹೆಚ್ಚಿನ ಸ್ಥಾನವನ್ನು ನಾವು ಕೇಳುತ್ತಿಲ್ಲ ಎಂದು ಹೇಳಿದರು. ಜೆಡಿಎಸ್‌ ಉಳಿಸಿಕೊಳ್ಳಲು ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡೆವು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next