Advertisement

Alekkadi-ಎಡಮಂಗಲ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

04:28 PM Aug 27, 2024 | Team Udayavani |

ಸುಳ್ಯ: ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಎಡಮಂಗಲ ಗ್ರಾಮದ ಮಾಲೆಂಗಿರಿ ಎಂಬಲ್ಲಿ ಸೇತುವೆಯ ಅಡಿ ಭಾಗ ಕುಸಿದ ಪರಿಣಾಮ ಸಂಪರ್ಕ ನಿರ್ಬಂಧಿಸಲಾಗಿದ್ದ ಸ್ಥಳದಲ್ಲಿ ಈಗ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.

Advertisement

ಸಂಚಾರ ನಿರ್ಬಂಧಿಸಿದ್ದ ಕಾರಣ ಅಲೆಕ್ಕಾಡಿ-ಎಡಮಂಗಲ ನಡುವೆ ಸಂಪರ್ಕ ಕಡಿತಗೊಂಡಿತ್ತು. ಜನರು ಸುತ್ತು ಬಳಸಿ ಸಂಚಾರಿಸಬೆಕಾಗಿತ್ತು.

ಘಟನ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕಿ ಭಾಗೀರಥಿ ಮುರುಳ್ಯ ಇಲಾಖೆ ಜತೆ ಮಾತುಕತೆ ನಡೆಸಿ ತಾತ್ಕಲಿಕ ಸಂಪರ್ಕ ವ್ಯವಸ್ಥೆಗೆ ಸೂಚಿಸಿದ್ದರು. ಸ್ಥಳೀಯರಿಗೆ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಈಗ ಮೋರಿ ಅಳವಡಿಸಿ ಸಂಪರ್ಕ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರಲೆ

ಈಗ ದ್ವೀಚಕ್ರ ವಾಹನ, ಲಘು ವಾಹನ ಸಂಚಾರಕ್ಕೆ ರಸ್ತೆ ಮುಕ್ತವಾಗಿಸಲಾಗಿದೆ. ಸದ್ಯ ಮಳೆ ಆಗುತ್ತಿರುವುದರಿಂದ ಘನ ವಾಹನ ಸಂಚಾರಕ್ಕೆ ಅವಕಾಶ ನೀಡುವು ದಿಲ್ಲ ಎಂದು ಆಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next