Advertisement

Dandeli: ಅನಧಿಕೃತವಾಗಿ ಸರಾಯಿ ಕುಡಿಯಲು ಅವಕಾಶ : ಪೊಲೀಸರಿಂದ ದಾಳಿ

03:47 PM Jul 14, 2023 | Team Udayavani |

ದಾಂಡೇಲಿ: ಅಂಗಡಿಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಅನಧಿಕೃತವಾಗಿ ಸರಾಯಿಯನ್ನು ಕುಡಿಯಲು ಅನುವು ಮಾಡಿಕೊಟ್ಟ ಸಂದರ್ಭ ದಾಂಡೇಲಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ, ಅನಧಿಕೃತವಾಗಿ ಮಾರಾಲಿಟ್ಟಿದ್ದ ಮದ್ಯವನ್ನು ವಶಪಡಿಸಿಕೊಂಡಿರುವ ಘಟನೆ ನಗರದ ಹಳಿಯಾಳ ರಸ್ತೆಯ ಮೂರು ನಂ. ಗೇಟ್ ಬಳಿ ನಡೆದಿದೆ.

Advertisement

ಹಳಿಯಾಳ ರಸ್ತೆಯ ಮೂರು ನಂ. ಗೇಟ್ ಬಳಿಯಿರುವ ಅಂಗಡಿಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಂಗಡಿಯಾತ ದೇವರಾಜ ಎಂಬಾತ ಸಾರ್ವಜನಿಕರಿಗೆ ಅನಧಿಕೃತವಾಗಿ ಸರಾಯಿ  ಕುಡಿಯಲು ಅವಕಾಶ ಮಾಡಿಕೊಟ್ಟಿದ್ದ.

ಈ ಸಂದರ್ಭದಲ್ಲಿ ದಾಂಡೇಲಿ ನಗರ ಠಾಣೆಯ ಪಿಎಸ್ಐ ಐ.ಆರ್.ಗಡ್ಡೇಕರ್ ನೇತೃತ್ವದ ಪೊಲೀಸರ ತಂಡ ದಾಳಿ ಮಾಡಿ ಸರಾಯಿ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟ ದೇವರಾಜ ಮತ್ತು ಅನಧಿಕೃತವಾಗಿ ಅಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next