Advertisement

ಆಲಪ್ಪುಳ ಅವಳಿ ಕೊಲೆ ಪ್ರಕರಣ : ಪೊಲೀಸರಿಂದ ಇಬ್ಬರ ಬಂಧನ

09:23 PM Dec 20, 2021 | Team Udayavani |

ಆಲಪ್ಪುಳ/ಕೊಚ್ಚಿ: ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡು ರಾಜಕೀಯ ಹತ್ಯೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Advertisement

ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ವಿಜಯ ಸಖ್ರೆ ಅವರು ತನಿಖೆಯ ನೇತೃತ್ವ ವಹಿಸಿದ್ದು, ಎಸ್‌ಡಿಪಿಐ ಮುಖಂಡ ಕೆ.ಎಸ್‌.ಶಾನ್‌ ಅವರ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಸುಳಿವು ಸಿಕ್ಕಿದೆ. ಹತ್ತು ಮಂದಿ ಅವರ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂದು ಸದ್ಯಕ್ಕೆ ಸುಳಿವು ಸಿಕ್ಕಿದೆ ಎಂದು ವಿಜಯ ಸಖ್ರೆ ತಿಳಿಸಿದ್ದಾರೆ. ಬಂಧಿತರನ್ನು ಪ್ರಸಾದ್‌ ಮತ್ತು ರತೀಶ್‌ ಎಂದು ಗುರುತಿಸಲಾಗಿದೆ ಎಂದಿದ್ದಾರೆ. ಬಿಜೆಪಿ ಮುಖಂಡ ರೆಂಜಿತ್‌ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಸುಳಿವು ಸಿಕ್ಕಿದೆ ಎಂದು ಹೇಳಿದ್ದಾರೆ.

ಇದೇ ವೇಳೆ, ಕೇರಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾಂದ ರಾಯ್‌ ಹೇಳಿದ್ದಾರೆ. ಬಿಜೆಪಿ ಮುಖಂಡ ರೆಜಿಂತ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಅವರು ಮಾತನಾಡಿದ್ದಾರೆ. ಎಲ್‌ಡಿಎಫ್ ಸರ್ಕಾರದ ಅವಧಿಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲಿನ ದಾಳಿ ತಡೆಯಲು ವಿಫ‌ಲವಾಗಿದೆ ಎಂದು ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next