Advertisement

ಆಲೂರು(ಬಿ) ಘಟನೆ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

05:08 PM Aug 11, 2022 | Team Udayavani |

ಕಲಬುರಗಿ: ಚಿತ್ತಾಪುರ ತಾಲೂಕಿನ ಆಲೂರು(ಬಿ) ಗ್ರಾಮದಲ್ಲಿ ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌, ಬಾಬು ಜಗಜೀವನರಾಮ್‌ ಭಾವಚಿತ್ರ ಇರುವ ಬ್ಯಾನರ್‌ ಹರಿದು ಹಾಕಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಮಾದಿಗ ಸಮನ್ವಯ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದರು.

Advertisement

ಈ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಲಿಂಗರಾಜ್‌ ತಾರಫೈಲ್‌, ಬಾಬು ಜಗಜೀವನರಾಮ್‌ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಜಿಲ್ಲಾಡಳಿತ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ ಮಾತನಾಡಿ, ಇಬ್ಬರೂ ಮಹನೀಯರಿಗೆ ಅವಮಾನ ಮಾಡುವುದು ಎಂದರೆ ಎಲ್ಲ ವರ್ಗದ ಜನರಿಗೆ, ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಅವಮಾನ ಮಾಡಿದಂತೆ. ಆದ್ದರಿಂದ ಕೂಡಲೇ ಅವರನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸಹ ಕಾರ್ಯದರ್ಶಿ ದಿಗಂಬರ ತ್ರಿಮೂರ್ತಿ, ರಾಹುಲ್‌ ಮೇತ್ರೆ, ಶಿವರಾಂ ಭಂಡಾರಿ, ಚಿದಾನಂದ ಲಕ್ಷ್ಮೀಪುರ, ಕೆಂಚಪ್ಪ ತಾರಫೈಲ್‌, ಮರಿಯಣ್ಣ ಆಲೂರು, ಶರಣಪ್ಪ ಕಟ್ಟಿಮನಿ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next