ಮೂಡಬಿದಿರೆ;ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ 14ನೇ ವರ್ಷದ ಆಳ್ವಾಸ್ ನುಡಿಸಿರಿ ನಾಡು ನುಡಿ ಸಂಸ್ಕೃತಿಯ ಹಬ್ಬಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಗುರುವಾರ ಸಂಜೆ ಮಂಡ್ರುದೆಗುತ್ತು ರಾಮಮೋಹನ ರೈ ಆವರಣದಲ್ಲಿನ ಕೃಷಿ ಸಿರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾಗವಹಿಸುತ್ತಿಲ್ಲ ಎಂದು ಉನ್ನತ ಮೂಲಗಳು ಉದಯವಾಣಿಗೆ ತಿಳಿಸಿವೆ.
ದೆಹಲಿಯಲ್ಲಿನ ತುರ್ತು ಕಾರ್ಯಕ್ರಮದಲ್ಲಿ ದೇವೇಗೌಡರು ಭಾಗವಹಿಸುತ್ತಿದ್ದು, ಕೃಷಿ ಸಿರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರುಹಾಜರಾಗುತ್ತಿರುವುದಾಗಿ ಮೂಲಗಳು ಹೇಳಿವೆ.
ರತ್ನಾಕರವರ್ಣಿ ವೇದಿಕೆಯಲ್ಲಿ ಗುರುವಾರ ಬೆಳಗ್ಗೆ ವಿದ್ಯಾರ್ಥಿ ಸಿರಿ-ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೊಂಡಿತ್ತು. ರಂಗಕರ್ಮಿ ಮಂಡ್ಯ ರಮೇಶ್ ಅವರು ವಿದ್ಯಾರ್ಥಿ ಸಿರಿಯನ್ನು ಉದ್ಘಾಟಿಸಿದರು. ಉಜಿರಿ ಎಸ್ ಡಿಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅರ್ಜುನ ಶೆಣೈ ಅಧ್ಯಕ್ಷತೆ ವಹಿಸಿದ್ದರು.