Advertisement

ಕನ್ನಡ ಕಟ್ಟುವ ಕಾರ್ಯಕ್ಕೆ ಸದಾ ಬದ್ದ

05:18 PM Jan 07, 2022 | Team Udayavani |

ಭಾಲ್ಕಿ: ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಭೇಟಿ ನೀಡಿದರು.

Advertisement

ಔರಾದ್‌ನಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 132ನೆಯ ಜಯಂತ್ಯುತ್ಸವ ಮತ್ತು ತಾಲೂಕು ಗಡಿ ಕನ್ನಡೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಮಾರ್ಗ ಮಧ್ಯದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ ಉಭಯ ಶ್ರೀಗಳ ಕುಶಲೋಪರಿ ವಿಚಾರಿಸಿ ಸನ್ಮಾನ ಸ್ವೀಕರಿಸಿ ಆಶೀರ್ವಾದ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ಗಡಿ ಸೇರಿ ರಾಜ್ಯಾದ್ಯಂತ ಕನ್ನಡ ಕಟ್ಟುವ ಕಾರ್ಯಕ್ಕೆ ಸದಾ ಬದ್ಧ ಇರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಶಣ್ಣಿರಪ್ಪ, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಅಶ್ವಿ‌ನಿ ಗೌಡ, ಪ್ರಧಾನ ಕಾರ್ಯದರ್ಶಿ ಸಹನಾ ಶೇಖರ್‌, ರಾಜ್ಯ ಸಂಘಟನಾ ಕಾರ್ಯದರ್ಶಿ ಅಬ್ಬಿಗೇರೆ ವಿನೋದ, ಕಸಾಪದ ನಿಕಟಪೂರ್ವ ಅಧ್ಯಕ್ಷ ಶಶಿಧರ ಕೋಸಂಬೆ, ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳಕರ್‌, ತಾಲೂಕು ಅಧ್ಯಕ್ಷ ಗಣೇಶ್‌ ಪಾಟೀಲ್‌ ಜ್ಯಾಂತಿ, ಯುವ ಘಟಕದ ಅಧ್ಯಕ್ಷ ಸಂದೀಪ ತೂಗಾಂವೆ, ಪ್ರಮುಖರಾದ ಸಂತೋಷ ಬಿಜಿ ಪಾಟೀಲ್‌, ಗಿರೀಶ ಬಿರಾದಾರ್‌, ರಾಜು ಕುಂಬಾರ್‌, ದೀಪಕ ಠಮಕೆ ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next