Advertisement

ಎಸ್ಎಂ ಕೃಷ್ಣ ಬಿಜೆಪಿಗೆ ಬಂದ್ರ ಸ್ವಾಗತ, ಪಕ್ಷದ ಶಕ್ತಿ ಹೆಚ್ಚಾಗಲಿದೆ!

03:01 PM Jan 29, 2017 | Team Udayavani |

ಮಡಿಕೇರಿ:ಹಿರಿಯ ರಾಜಕೀಯ ಧುರೀಣ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ರಾಜಕೀಯ ಲೆಕ್ಕಚಾರ ಆರಂಭವಾಗತೊಡಗಿದೆ. ಮತ್ತೊಂದೆಡೆ ಎಸ್ .ಎಂ.ಕೃಷ್ಣ ಅವರು ಬಿಜೆಪಿಗೆ ಬಂದ್ರೆ ಸ್ವಾಗತಿಸುವುದಾಗಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಿಳಿಸಿದ್ದಾರೆ.

Advertisement

ಮಡಿಕೇರಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಎಸ್.ಎಂ.ಕೃಷ್ಣ ಅವರಂತಹ ನೇರ ನುಡಿಯ, ಸರಳ ವ್ಯಕ್ತಿತ್ವದವರು ಬಿಜೆಪಿ ಪಕ್ಷಕ್ಕೆ ಬೇಕಾಗಿದೆ. ಕೃಷ್ಣ ಅವರ ವ್ಯಕ್ತಿತ್ವ ಬಿಜೆಪಿಗೆ ಸೂಟ್ (ಹೊಂದಾಣಿಕೆ) ಆಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಮನನೊಂದು ರಾಜೀನಾಮೆ ನೀಡಿದ್ದೇನೆ. ಆದರೆ ಸಕ್ರಿಯ ರಾಜಕಾರಣದಿಂದ ದೂರ ಸರಿದಿಲ್ಲ ಎಂದು ಭಾನುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು. ಕಾಂಗ್ರೆಸ್ ತೊರೆದ ನೀವು ಬಿಜೆಪಿಗೆ ಸೇರುತ್ತೀರಾ ಎಂಬ ಪ್ರಶ್ನೆಗೆ ಎಸ್ಎಂಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರತಿಯೊಂದು ಪ್ರಶ್ನೆಗೂ ಉತ್ತರ ಕೊಡೋಕೆ ಇದೇನು ಅಸೆಂಬ್ಲಿನಾ ಎಂದು ತಿರುಗೇಟು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next