Advertisement

ಬಿಜೆಪಿ ಬಿಡಲ್ಲ..ಕಾಂಗ್ರೆಸ್ ಸೇರೊಲ್ಲ : ಶಾಸಕ ನಡಹಳ್ಳಿ ಸ್ಪಷ್ಟನೆ

07:53 PM Jul 25, 2021 | Team Udayavani |

ಮುದ್ದೇಬಿಹಾಳ: ನಾನು ಕಾಂಗ್ರೆಸ್ ಸೇರುವುದಾಗಿ ಅಪಪ್ರಚಾರ ಮಾಡಲಾಗುತ್ತಿದೆ. ನಾನು ಬಿಜೆಪಿಯಲ್ಲೇ ಇದ್ದು ಪಕ್ಷದ ಬಲವರ್ಧನೆಗೆ ತೊಡಗಿಸಿಕೊಳ್ಳುತ್ತೇನೆ ಎಂದು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಸ್ಪಷ್ಟಪಡಿಸಿದರು.

Advertisement

ಇಂದು (ಜು.25) ಇಲ್ಲಿನ ಶ್ರೀ ರಾಘವೇಂದ್ರ ಮಂಗಲ ನಡೆದ ಮಂಡಲ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹಿಂದೆ ಕಾಂಗ್ರೆಸ್ ನಲ್ಲಿದ್ದೆ. ಅಲ್ಲಿನ ವಾತಾವರಣ ಕಂಡು ಆ ಪಕ್ಷ ತೊರೆದು ಬಿಜೆಪಿಗೆ ಬಂದಿದ್ದೇನೆ. ಇಲ್ಲಿ ಅಭಿವೃದ್ಧಿಗೆ ಪೂರಕವಾದ ಉತ್ತಮ ವಾತಾವರಣ ಇದೆ. ಈ ಮತಕ್ಷೇತ್ರದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಹಿರಿಯರ ಬಗ್ಗೆ ಅಪಾರ ಅಭಿಮಾನ ಇದೆ. ಅವರು ಹೇಳುವ ಕೆಲಸವನ್ನು ಚಾಚು ತಪ್ಪದೆ ಮಾಡುತ್ತೇನೆ. ಮೊದಲ ಬಾರಿಗೆ ಇಲ್ಲಿ ಬಿಜೆಪಿಗೆ ಶಾಸಕ ಸ್ಥಾನ ದೊರೆತಿದೆ. ನಾನು ಮಾಡುತ್ತಿರುವ ಅಭಿವೃದ್ಧಿ ಕೆಲಸಕ್ಕೆ ಜನತೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷ ಕೈಗೊಳ್ಳುವ ಎಲ್ಲ ಕಾರ್ಯಗಳಲ್ಲಿ ಮಂಡಲದ ಅಧ್ಯಕ್ಷರಿಗೆ ಬೆಂಬಲವಾಗಿ ನಿಲ್ಲುತ್ತೇನೆ ಎಂದರು.

ಮಹತ್ವ ಪಡೆದುಕೊಂಡ ಹೇಳಿಕೆ:

ಬಿಜೆಪಿ ಮುಖಂಡರು, ಕಾರ್ಯಕರ್ತರ ಎದುರೇ ಶಾಸಕರ ಈ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಬಿಜೆಪಿಯ ಕೆಲವರೇ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎನ್ನುವ ಸುದ್ದಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರ ಸಮ್ಮುಖ ತಮ್ಮ ಮನದಾಳದ ಮಾತುಗಳನ್ನಾಡಿದ ಶಾಸಕರು ಸೋಮವಾರ ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಸರ್ಕಾರದ ಎರಡನೇ ವರ್ಷಾಚರಣೆ ಸಂಭ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ನಿರ್ಗಮಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next