Advertisement

ಪಂಜಾಬ್‌ನಲ್ಲಿ ಆಪ್‌ ಜತೆ ಮೈತ್ರಿ ಅಗತ್ಯವೇ ಇಲ್ಲ: ಸಿಎಂ ಅಮರೀಂದರ್‌

10:41 AM Jan 07, 2019 | Team Udayavani |

ಹೊಸದಿಲ್ಲಿ : ಪಂಜಾಬ್‌ನಲ್ಲಿ ಅಸ್ತಿತ್ವದಲ್ಲೇ ಇಲ್ಲದ ಆಮ್‌ ಆದ್ಮಿ ಪಕ್ಷದೊಂದಿಗೆ ಲೋಕಸಭಾ ಚುನಾವಣೆಗಾಗಿ ಯಾವುದೇ ಮೈತ್ರಿ ರೂಪಿಸಿಕೊಳ್ಳುವ ಅಗತ್ಯವೇ ಇಲ್ಲ ಎಂದು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಅವರಿಂದು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

Advertisement

ಪಂಜಾಬ್‌ನಲ್ಲಿ ಅರವಿಂದ ಕೇಜ್ರಿವಾಲರ ಆಮ್‌ ಆದ್ಮಿ ಪಕ್ಷ ಅಸ್ತಿತ್ವದಲ್ಲೇ ಇಲ್ಲ. ಹಾಗಿರುವಾಗ ಅದರೊಂದಿಗೆ ಮೈತ್ರಿ ರೂಪಿಸಿಕೊಳ್ಳುವ ಅಗತ್ಯವೂ ಇಲ್ಲ. ಈ ವಿಷಯವನ್ನು ಪಕ್ಷದ ಹೈಕಮಾಂಡಿಗೆ ತಿಳಿಸಲಾಗಿದೆ. ಆದರೆ ರಾಹುಲ್‌ ಗಾಂಧಿ ಜತೆಗಿನ ಇಂದಿನ ಮಾತುಕತೆಯಲ್ಲಿ ನಾನು ಈ ವಿಷಯವನ್ನು ಪ್ರಸ್ತಾವಿಸಿಲ್ಲ ಎಂದು ಸಿಎಂ ಅಮರೀಂದರ್‌ ಸಿಂಗ್‌ ಹೇಳಿದರು. 

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಪಂಜಾಬ್‌ ನಲ್ಲಿನ ಎಲ್ಲ 13 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದು ಸಿಎಂ ಹೇಳಿದರು. ಆದರೆ ಕಣಕ್ಕೆ ಇಳಿಸಲಾಗುವ ಪಕ್ಷದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ ಎಂದವರು ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next