Advertisement
ಮಂಗಳೂರು ತೊಕ್ಕೊಟ್ಟು ಇಲ್ಲಿನ ಅಸೆ„ಗೋಳಿ ಅಭಯಾಶ್ರಮದಲ್ಲಿ ಸೆ. 30ರಂದು ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದ ಚಿತ್ರೀಕರಣ ಪೂರ್ಣಗೊಂಡು ಇದೀಗ ಸೆನ್ಸಾರ್ ಬೋರ್ಡ್ನಲ್ಲಿದೆ. ಬಹುವೆಚ್ಚದ ದುಬಾರಿ ತುಳು ಚಲನಚಿತ್ರ ಇದಾಗಿದ್ದು, ಹಿಂದಿ ಚಲನಚಿತ್ರದ ಶೈಲಿಯಲ್ಲಿ ಸಂಪೂರ್ಣವಾಗಿ ಚಿತ್ರವನ್ನು ಚಿತ್ರೀಕರಿಸಲಾಗಿದೆ. ತುಳು ಚಲನಚಿತ್ರದ ಇತಿಹಾಸದಲ್ಲೇ ಇದೊಂದು ಪ್ರಥಮ ಪ್ರಯತ್ನ. ಪರಶುರಾಮನ ಸೃಷ್ಟಿಯ ತುಳುನಾಡಿನ ಪ್ರಾದೇಶಿಕ ಭಾಷೆ ಅದಕ್ಕಿಂತಲೂ ಮೊದಲಾಗಿ ನನ್ನ ಮಾತೃಭಾಷೆಯಲ್ಲಿ ಸಿನೆಮಾವೊದಂದನ್ನು ನಿರ್ಮಿಸುವ ಕನಸು ನನ್ನಲ್ಲಿತ್ತು. ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದನಾಗಿರುವ ಪುತ್ರ ಕಡಂದಲೆ ಸೌರಭ್ ಸುರೇಶ್ ಭಂಡಾರಿ ಈ ಚಿತ್ರದ ನಾಯಕ ನಟನಾಗಿ ಮತ್ತು ಹೆಸರಾಂತ ಯುವಕಲಾವಿದೆ ಸಿಂಧು ಲೋಕನಾಥ್ ನಾಯಕಿ ನಟಿಯಾಗಿ ಅಭಿನಯಿಸಿದ ಅಭಿಮಾನ ನನಗಿದೆ. ಜೈ ಪ್ರಸಾದ್ ಬಜಾಲ್ ರಚಿಸಿ, ನಿರ್ದೇಶನ ಹಾಗೂ ಸತೀಶ್ ಬ್ರಹ್ಮಾವರ್ ನಿರ್ಮಾಣ ನಿರ್ವಹಣೆ ಮತ್ತು ಸಂತೋಷ್ ರೈ ಪಾತಾಜೆ ಛಾಯಾಗ್ರಹಣದಲ್ಲಿ ಚಿತ್ರೀಕರಿಸಲ್ಪಟ್ಟ ಈ ಚಿತ್ರಕ್ಕೆ ಕದ್ರಿ ಮಣಿಕಾಂತ್ ಸಂಗೀತ ನೀಡಿದ್ದು ಚಿತ್ರೀಕರಣ ಪೂರ್ಣಗೊಂಡು, ಚಿತ್ರವು ಅತ್ಯುತ್ತಮವಾಗಿ ಮೂಡಿ ಬಂದಿದೆ. ತುಳು ಭಾಷೆ ಬೆಳೆಯುತ್ತಿದೆ. ತುಳು ಚಲನಚಿತ್ರಗಳಿಂದ ಭಾಷೆಯ ಮೇಲಿನ ಪ್ರೀತಿಯೂ ಹೆಚ್ಚಾಗುವುದರ ಜತೆಗೆ ಹೊಸ ಕಲಾವಿದರಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಅನ್ನುವ ಉದ್ದೇಶದೊಂದಿಗೆ ಚಿತ್ರ ನಿರ್ಮಿಸಲಾಗಿದೆ ಎಂದು ನುಡಿದರು.
ಸುವ ಭರವಸೆ ನನಗಿದೆ ಎಂದರು. ಹರೀಶ್ ಕಟಪಾಡಿ, ಶ್ರೇಯಸ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Related Articles
Advertisement