Advertisement

ಅಂಬರೀಶ್‌ ಹೆಸರು ಮಗ ಉಳಿಸುತ್ತಾನೆ ; ಮಾಜಿ ಪ್ರಧಾನಿ ಎಚ್‌ಡಿಡಿ ಭವಿಷ್ಯ

11:13 AM Nov 25, 2018 | Team Udayavani |

ಬೆಂಗಳೂರು : ರೆಬೆಲ್‌ಸ್ಟಾರ್‌ ಅಂಬರೀಶ್‌ ಅವರ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ತಂದೆಯ ಹೆಸರನ್ನು ಮಗ ಅಭಿಷೇಕ್‌ ಉಳಿಸುತ್ತಾನೆ. ಈ ವಿಶ್ವಾಸ ನನಗೆ ಇದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಹೇಳಿದ್ದಾರೆ. 

Advertisement

ಪತ್ನಿ ಚೆನ್ನಮ್ಮ ಮತ್ತು ಪುತ್ರ, ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಆಗಮಿಸಿ ಅಂತಿಮ ದರ್ಶನ ಪಡೆದು ಅಂಬರೀಶ್‌ ಅವರ ಪತ್ನಿ ಸುಮಲತಾ ಅವರಿಗೆ ಸಾಂತ್ವನ ಹೇಳಿದರು. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಅಂಬರೀಶ್‌ ಅವರು ನಮ್ಮ ಪಕ್ಷದಲ್ಲಿದ್ದರು. ಅವರನ್ನು ಕಳೆದುಕೊಂಡು ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ಜೊತೆಯಲ್ಲಿ ಕೆಲಸ ಮಾಡಿದ್ದೆ. ಕಾವೇರಿ ವಿಚಾರಕ್ಕೆ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಠ ಬಿಟ್ಟವರಲ್ಲ. ಅವರ ಹೆಸರನ್ನು ಮಗ ಉಳಿಸುತ್ತಾನೆ ಎನ್ನುವ ಭಾವನೆ ನನ್ನಲ್ಲಿ ಮೂಡಿ ಬಂದಿದೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next