Advertisement

ಜಿಲ್ಲಾದ್ಯಂತ ಮಹಾ ಮಾನವತಾವಾದಿಗೆ ನಮನ

05:54 PM Apr 15, 2021 | Team Udayavani |

ಬಳ್ಳಾರಿ : ಡಾ| ಬಿ.ಆರ್‌ ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ 130 ನೇ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಬುಧವಾರ ಆಚರಿಸಲಾಯಿತು.

Advertisement

ನಗರದ ಡಾ| ಬಿ.ಆರ್‌.ಅಂಬೇಡ್ಕರ್‌ ಭವನದ ಬಳಿಯಿರುವ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ಶಾಸಕರಾದ ಜಿ.ಸೋಮಶೇಖರ್‌ ರೆಡ್ಡಿ, ಬಿ. ನಾಗೇಂದ್ರ, ಜಿಲ್ಲಾಧಿಕಾರಿ ಪವನಕುಮಾರ್‌ ಮಾಲಪಾಟಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಸೈದುಲು ಅಡಾವತ್‌, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್‌ ಅವರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಮುಂಡ್ರಿಗಿ ನಾಗರಾಜ್‌, ಎ.ಮಾನಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಇತರರು ಇದ್ದರು.

ಮಾಸ್ಕ್ ಇಲ್ಲದವರನ್ನು ಗದರಿದ ಡಿಸಿ: ಜಯಂತಿ ಆಚರಿಸಲು ಬಂದಿದ್ದವರಲ್ಲಿ ಮಾಸ್ಕ್ ಹಾಕದವರನ್ನು ಜಿಲಾಧಿÉಕಾರಿ ಪವನಕುಮಾರ್‌ ಮಾಲಪಾಟಿ ಅವರು ಮಾಸ್ಕ್ ಹಾಕಿಕೊಂಡು ಒಳಗೆ ಬನ್ನಿ, ಇದು ನಿಮ್ಮ ಒಳ್ಳೆಯದಕ್ಕಾಗಿ ಹೇಳುತ್ತಿರುವುದು, ಮಾಸ್ಕ್ ಇಲ್ಲದೆ ಯಾರೂ ಹತ್ತಿರ ಬರಬೇಡಿ ಎಂದು ಗದರಿಸಿದ ಪ್ರಸಂಗ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next