Advertisement

ಅಂಬೇಡ್ಕರ್‌ ವಿಶ್ವಕ್ಕೆ ಮಾದರಿ: ಶಿವಗುಂಡಪ್ಪ

03:09 PM Dec 07, 2018 | Team Udayavani |

ಭಾಲ್ಕಿ: ಡಾ|ಬಿ.ಆರ್‌.ಅಂಬೇಡ್ಕರ್‌ ಅವರು ವಿಶ್ವಕ್ಕೇ ಮಾದರಿಯಾದ ಸಂವಿಧಾನವನ್ನು ನಮಗೆ ನೀಡಿದ್ದಾರೆ. ಹೀಗಾಗಿ ಅವರು ವಿಶ್ವಕ್ಕೇ ಮಾದರಿಯಾದ ವ್ಯಕ್ತಿಯಾಗಿದ್ದಾರೆ. ಅವರ ತತ್ವ-ಸಿದ್ಧಾಂತಗಳನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗುಂಡಪ್ಪ ಎಚ್‌.ಎಸ್‌. ಹೇಳಿದರು.

Advertisement

ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಗುರುವಾರ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ 62ನೇ ಮಹಾ ಪರಿನಿರ್ವಾಣ ದಿನ ನಿಮಿತ್ತ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಮತ್ತು ಹೋರಾಟದ ಗುಣಗಳಿಂದ ಅವರು ದೀನ, ದಲಿತರನ್ನು ಉತ್ತಮ ದಾರಿಗೆ ತಂದಿದ್ದಾರೆ. ಇಂತಹ ಮಹಾನ್‌ ವ್ಯಕ್ತಿಗಳ ಆದರ್ಶ ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಹೇಳಿದರು. ಜಿ.ಜೆ.ಶಿಕ್ಷಣ ಸಂಸ್ಥೆಯ ಬಿ.ಇಡಿ ಕಾಲೇಜಿನ ಉಪನ್ಯಾಸಕ ಮಿಸ್ಟರ್‌ ಸ್ವಾಮಿ ಮಾತನಾಡಿ, ಡಾ|ಬಿ.ಆರ್‌. ಅಂಬೇಡ್ಕರ್‌ ಅವರು ಬಡ ಕುಟುಂಬದಲ್ಲಿ ಹುಟ್ಟಿ, ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ವಿಶ್ವವೇ ಗುರುತಿಸುವಂತಾದರು. ನಮ್ಮ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದಲ್ಲಿ ಉತ್ತಮ ವ್ಯಕ್ತಿಗಳಾಗಿ ಹೊರ ಹೊಮ್ಮಬಹುದು ಎಂದು ಅಲಹೆ ನೀಡಿದರು. ಶಿಕ್ಷಕ ಯುವರಾಜ ಪಾಟೀಲ, ದೀಪಕ ಗಾಯಕವಾಡ, ಸುಭಾಷ ಜಲೆª ಪ್ರಶಾಂತ ಶ್ರೀಮಾಳಿ ಇದ್ದರು. ಅಮೃತ ಮುದ್ದಾ ಸ್ವಾಗತಿಸಿದರು. ಶಿವಕುಮಾರ ವಾಡಿಕರ ನಿರೂಪಿಸಿದರು. ಸಂತೋಷ ಕಾಳೆ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next