Advertisement

ಜಿಲ್ಲೆಯ ವಿವಿಧೆಡೆ ಡಾ|ಅಂಬೇಡ್ಕರ್‌ ಜಯಂತಿ ಆಚರಣೆ

02:12 PM Apr 15, 2020 | sudhir |

ಮಂಗಳೂರು: ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 129ನೇ ಜಯಂತಿಯನ್ನು ಜಿಲ್ಲೆಯ
ವಿವಿಧೆಡೆ ಎ. 14ರಂದು ಆಚರಿಸಲಾಯಿತು.

Advertisement

ಮಂಗಳೂರು ಮೇಯರ್‌ ದಿವಾಕರ್‌ ಪಾಂಡೇಶ್ವರ ಅವರು ಮಂಗಳೂರು ಪುರಭವನದ ಮುಂಭಾಗದಲ್ಲಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಂಟ್ವಾಳ ತಾಲೂಕು ಪಂಚಾಯತ್‌ ವತಿ ಯಿಂದ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬಿ.ಸಿ. ರೋಡ್‌ನ‌ಲ್ಲಿರುವ ತಾ.ಪಂ.ನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಅಂಬೇಡ್ಕರ್‌ ಜಯಂತಿಯನ್ನು ಆಚರಿ ಸಲಾಯಿತು.

ಬೆಳ್ತಂಗಡಿ ತಾಲೂಕು ಆಡಳಿತದ ವತಿಯಿಂದ ಮಿನಿ ವಿಧಾನ ಸೌಧದ ಸಭಾಂಗಣ, ಪುತ್ತೂರು ಮಿನಿ ವಿಧಾನಸೌಧ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿಯೂ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next