Advertisement

ಕಾಂಗ್ರೆಸ್‌ ಭವನದಲ್ಲಿ ಅಂಬೇಡ್ಕರ್‌ ಜಯಂತಿ

04:36 PM Apr 15, 2020 | Suhan S |

ಹಾಸನ: ನಗರದ ಬಿ.ಎಂ.ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ 129ನೇ ಜಯಂತಿ ಆಚರಿಸಲಾಯಿತು.

Advertisement

ಡಾ.ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಾವಗಲ್‌ ಮಂಜುನಾಥ್‌ ಮಾತನಾಡಿ, ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದಾರೆ. ಪ್ರತಿಯೊಬ್ಬರೂ ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದರು.

ಕಾಂಗ್ರೆಸ್‌ ಮುಖಂಡರಾದ ಎಚ್‌.ಕೆ. ಮಹೇಶ್‌, ಎಚ್‌.ಕೆ. ಜವರೇಗೌಡ, ದೇವರಾಜೇಗೌಡ, ಕೆಲವತ್ತಿ ಸೋಮಶೇಖರ್‌, ಮುನಿಸ್ವಾಮಿ, ಕುಮಾರಸ್ವಾಮಿ, ಕಟ್ಟಾಯ ಅಶೋಕ್‌, ರಂಗಸ್ವಾಮಿ, ಖಡಾಖಡಿ ಪೀರ್‌ ಸಾಬ್‌, ಶಿವಕುಮಾರ್‌ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next