Advertisement

“ಕೆಲವರಿಗೆ ಮತಕ್ಕಷ್ಟೇ ಅಂಬೇಡ್ಕರ್‌ ಬೇಕು’

11:39 AM Dec 08, 2017 | Team Udayavani |

ಹೊಸದಿಲ್ಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಹೆಸರಿನಲ್ಲಿ ಮತ ಕೇಳುತ್ತಿರುವ ರಾಜಕೀಯ ಪಕ್ಷಗಳು, ದೇಶ ನಿರ್ಮಾಣಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಅಳಿಸಿ ಹಾಕುವ ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ನವದಿಲ್ಲಿಯಲ್ಲಿ ನಿರ್ಮಾಣವಾಗಿರುವ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. 23 ವರ್ಷಗಳ ಹಿಂದೆಯೇ ಈ ಕೇಂದ್ರ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತಾದರೂ ಹೆಚ್ಚಿನದ್ದೇನೂ ಆಗಿರಲಿಲ್ಲ ಎಂದ ಮೋದಿ, ಬಾಬಾ ಸಾಹೇಬ್‌ ಅವರ ಕೊಡುಗೆ ಬಗ್ಗೆ ಮಾತನಾಡುವುದರ ಬದಲು ಬಾಬಾ ಭೋಲೇ (ಶಿವ ದೇವರು) ಬಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮಾತುಕತೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹೆಸರು ಪ್ರಸ್ತಾವ‌ ಮಾಡದೇ ಪ್ರಧಾನಿ ಮೋದಿ ಟೀಕಿಸಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next