Advertisement

ಸಮಾಜಕ್ಕೆ ಅಂಬೇಡ್ಕರ್‌ ಆದರ್ಶ ಅತ್ಯವಶ್ಯ

04:44 PM Dec 07, 2019 | Suhan S |

ಕೊಪ್ಪಳ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರಮಹಾ ಪರಿನಿರ್ವಾಣ ದಿನಾಚರಣೆ  ಅಂಗವಾಗಿ ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ ಅವರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ನಮಿಸಿದರು.

Advertisement

ನಂತರ ಮಾತನಾಡಿದ ಅವರು, ಭಾರತ ಸಂವಿಧಾನವು ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ನೀಡಿದ ಕೊಡುಗೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆ ಸಂವಿಧಾನ ನಮಗೆ ನೀಡಿದ ಹಕ್ಕು ಹಾಗೂ ಸ್ವಾತಂತ್ರ್ಯ ಒಳ್ಳೆಯ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಸಂವಿಧಾನವು ನಮ್ಮ ದೇಶದ ಪ್ರಗತಿಗೆ ಅತ್ಯವಶ್ಯಕವಾಗಿದೆ. ಆಡಳಿತ, ನಿತ್ಯ ಜೀವನ, ಕಾನೂನು ಮುಂತಾದ ವಿಷಯಗಳಿಗೆ ಸಂವಿಧಾನ ಮಾರ್ಗದರ್ಶಿಯಾಗಿದ್ದು, ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಬೇಕು ಎಂದರು. ಜಿಲ್ಲಾ ಸಾಂಖೀಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಈರಪ್ಪ ಆಶಾಪುರ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next