Advertisement

ಅಂಬೇಡ್ಕರ್ ಅವರ ಹೋರಾಟ ಲಕ್ಷಾಂತರ ಜನರಿಗೆ ಭರವಸೆ ನೀಡಿದೆ: ಪ್ರಧಾನಿ ಮೋದಿ

05:50 PM Dec 06, 2022 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭಾರತದ ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ ಮತ್ತು ನಮ್ಮ ರಾಷ್ಟ್ರಕ್ಕೆ ಅವರು ಸಲ್ಲಿಸಿದ ಅನುಕರಣೀಯ ಸೇವೆಯನ್ನು ಸ್ಮರಿಸಿದರು.

Advertisement

ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರೊಂದಿಗೆ ಸಂಸತ್ತಿನ ಸಂಕೀರ್ಣದಲ್ಲಿ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಿದರು.

ಟ್ವೀಟರ್‌ ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿಯವರು,”ಮಹಾಪರಿನಿರ್ವಾಣ ದಿನದಂದು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಾನು ಗೌರವ ನಮನ ಸಲ್ಲಿಸುತ್ತೇನೆ ಮತ್ತು ನಮ್ಮ ದೇಶಕ್ಕೆ ಅವರ ಅನುಕರಣೀಯ ಸೇವೆಯನ್ನು ಸ್ಮರಿಸುವುದಾಗಿ ಹೇಳಿದರು.


ಅಂಬೇಡ್ಕರ್ ಅವರ ಹೋರಾಟಗಳು ಲಕ್ಷಾಂತರ ಜನರಿಗೆ ಭರವಸೆಯನ್ನು ನೀಡಿವೆ. ಭಾರತಕ್ಕೆ ಇಷ್ಟು ಬೃಹತ್ ಸಂವಿಧಾನವನ್ನು ನೀಡುವ ಅವರ ಪ್ರಯತ್ನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಸಿಎಂ ಬಸವರಾಜ್‌ ಬೊಮ್ಮಾಯಿ ಕೂಡ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ.

Advertisement


ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಸದೃಢ, ಸಶಕ್ತ, ಸಮಾನತೆಯ ಭಾರತಕ್ಕಾಗಿ ಅವರು ಕಂಡಂತಹ ಕನಸುಗಳನ್ನು ನನಸು ಮಾಡುವ ಸಂಕಲ್ಪವನ್ನು ಮಾಡೋಣ ಎಂದು ಬೊಮ್ಮಾಯಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕೂಡ ಟ್ವೀಟ್‌ ಮಾಡಿ, ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಹಾದಿಯನ್ನು ಮರೆಯದೆ, ನಮ್ಮೆಲ್ಲರ ವಿಚಾರ ಮತ್ತು ಆಚಾರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಮ್ಮೊಳಗೆ ಸದಾ ಜೀವಂತವಾಗಿರಿಸಿಕೊಂಡು, ನಮಗಾಗಿ ಅವರು ಕಂಡ ಕನಸುಗಳನ್ನು ನನಸು‌ ಮಾಡೋಣ ಎಂದಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next