Advertisement

ಎಸ್.ಎಲ್. ಭೈರಪ್ಪ ಅವರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿ

09:58 AM Jan 26, 2020 | keerthan |

ಧಾರವಾಡ: ವರಕವಿ ಡಾ. ದ ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನಿಂದ ಕೊಡಮಾಡುವ 2019-20ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿಗೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ.

Advertisement

ಈ ಕುರಿತಂತೆ  ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಟ್ರಸ್ಟ್  ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ,  ಈ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಯನ್ನು ಜ. 31ರಂದು ಸಂಜೆ ಐದು ಗಂಟೆಗೆ ಬೇಂದ್ರೆ ಭವನದಲ್ಲಿ ಪ್ರದಾನ ಮಾಡಲಾಗುವುದು.

ಸಾಹಿತಿ ಡಾ. ಗುರುಲಿಂಗ ಕಾಪಸೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.  ಪ್ರೊ.‌ತೇಜಸ್ವಿ ಕಟ್ಟಿಮನಿ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದರು.

ಈ ಪ್ರಶಸ್ತಿ ಒಂದು ಲಕ್ಷ ರೂ. ಹಾಗೂ ಫಲಕ ಒಳಗೊಂಡಿದೆ. ಬೇಂದ್ರೆ ಟ್ರಸ್ಟ್ ಪ್ರಾರಂಭದಲ್ಲಿ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಸೇರಿ ನೀಡಿದ್ದ ಇಡಿಗಂಟನ್ನು ಠೇವಣಿ ಇಡಲಾಗಿತ್ತು. ಅದರಿಂದ ಬಂದ 90 ಸಾವಿರ ಹಾಗೂ ಸರ್ಕಾರ ನೀಡಿದ ಹತ್ತು ಸಾವಿರ ರೂ.‌ಸೇರಿ ಒಟ್ಟು ಒಂದು ಲಕ್ಷ ರೂ. ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next