Advertisement

ಆಂಬ್ಯುಲೆನ್ಸ್ ನಲ್ಲಿ ಆಕ್ಸಿಜನ್ ಇದೆಯೆಂದು ಸುಳ್ಳು ಹೇಳಿ ಸೋಂಕಿತೆಯ ಸಾವಿಗೆ ಕಾರಣವಾದ ಚಾಲಕ.!

07:48 PM May 12, 2021 | Suhan S |

ಶಿವಮೊಗ್ಗ:  ಆಂಬ್ಯುಲೆನ್ಸ್ ಚಾಲಕನೊಬ್ಬ ವಾಹನದಲ್ಲಿ ಆಕ್ಸಿಜನ್ ಇದೆಯೆಂದು ಸುಳ್ಳು ಹೇಳಿ ಸೋಂಕಿತೆ ವೃದ್ಧೆಯೊಬ್ಬರನ್ನು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆಯೇ  ವೃದ್ಧೆ ಪ್ರಾಣ ಬಿಟ್ಟ ಘಟನೆ ನಗರದಲ್ಲಿ ನಡೆದಿದೆ.

Advertisement

ಆಂಬುಲೆನ್ಸ್ ಚಾಲಕನೊಬ್ಬ ತನ್ನ ಆಂಬ್ಯುಲೆನ್ಸ್ ನಲ್ಲಿ ಆಕ್ಸಿಜನ್ ಇದೆಯೆಂದು 60 ವರ್ಷದ ಸೋಂಕಿತ ವೃದ್ಧೆಯನ್ನು ಭದ್ರಾವತಿಯಿಂದ ಶಿವಮೊಗ್ಗಕ್ಕೆ ಕರೆದುಕೊಂಡು ಬಂದಿದ್ದಾನೆ. ಆದರೆ ಮಹಿಳೆ ಅಸ್ಪತ್ರೆಗೆ ಸೇರುವ ಮುಂಚೆಯೇ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ.

ಕೋವಿಡ್ ಸೋಂಕಿನಿಂದ ಉಸಿರಾಟದ ಸಮಸ್ಯೆಯನ್ನು ಅನುಭವಿಸುತ್ತಿದ್ದ ಮಹಿಳೆಯನ್ನು ಆಕ್ಸಿಜನ್ ಇರುವ ಅಂಬ್ಯುಲೆನ್ಸ್ ನಲ್ಲಿ ಸಾಗಿಸುವ ಅನಿವಾರ್ಯತೆ ಇತ್ತು. ಆದರೆ ಆಂಬುಲೆನ್ಸ್ ಚಾಲಕನೊಬ್ಬ ತನ್ನ ವಾಹನದಲ್ಲಿ ಆಕ್ಸಿಜನ್ ಇಲ್ಲದೆ ಇದ್ದರೂ, ಆಕ್ಸಿಜನ್ ಇದೆಯೆಂದು ಹೇಳಿ ಸೋಂಕಿತೆಯ ಸಂಬಂಧಿಕರನ್ನು ನಂಬಿಸಿ, ಅಂಬ್ಯುಲೆನ್ಸ್ ನಲ್ಲಿ ಶಿವಮೊಗ್ಗದಿಂದ ಭದ್ರಾವರಿಗೆ ಹೋಗುತ್ತಿದ್ದಾನೆ. ಆದರೆ ದುರಂತ ಅಂದರೆ ಉಸಿರಾಟದ ತೀವ್ರ ಸಮಸ್ಯೆಯಲ್ಲಿದ್ದ ವೃದ್ಧೆ ಆಸ್ಪತ್ರೆ ಸೇರುವ ಮುನ್ನವೇ ಸಾವನ್ನಪ್ಪಿದ್ದಾರೆ.

ಭದ್ರಾವತಿಯ ಸರಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಇದ್ದಾಗಿದ್ದು, ಆಸ್ಪತ್ರೆಯಲ್ಲಿ ಈ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ. ಚಾಲಕನಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಚಾಲಕನ ಒಂದು ಸುಳ್ಳಿಗೆ ಅಮಾಯಕ ಜೀವವೊಂದು ಬಲಿಯಾದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next