Advertisement

ಪುತ್ತೂರು ಟು ಬೆಂಗಳೂರು: ಯುವತಿಯ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ ನಲ್ಲಿ ಸಾಗಿದ ಆಂಬುಲೆನ್ಸ್

01:27 PM Dec 02, 2020 | keerthan |

ಪುತ್ತೂರು: ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಸುಹನಾ (22 ವರ್ಷ) ಎಂಬಾಕೆಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Advertisement

ಪುತ್ತೂರು ಸಂಚಾರ ಪೊಲೀಸರು ನಗರ ವ್ಯಾಪ್ತಿಯಲ್ಲಿ ಆಂಬುಲೆನ್ಸ್ ನ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಆಂಬುಲೆನ್ಸ್ ಸಾಗಿ ಬರುವ ರಸ್ತೆಯಲ್ಲಿ ಆಯಾ ಊರಿನ ನಾಗರಿಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಆಂಬುಲೆನ್ಸ್ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು.

ಇದನ್ನೂ ಓದಿ:ಚಲಿಸುತ್ತಿದ್ದ ಬಸ್ 80 ಅಡಿ ಉದ್ದದ ಕಬ್ಬಿಣದ ಪೈಪ್ ಗೆ ಡಿಕ್ಕಿ-ಮಹಿಳೆ ಕುತ್ತಿಗೆ ಸೀಳಿ ಸಾವು

ಆಂಬುಲೆನ್ಸ್ ಸಾಗುವ ಮಾರ್ಗ:

ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಉಪ್ಪಿನಂಗಡಿ – ಗುರುವಾಯನಕೆರೆ – ಬೆಳ್ತಂಗಡಿ – ಉಜಿರೆ – ಚಾರ್ಮಾಡಿ – ಬಂಕಲ್ ಹ್ಯಾಂಡ್ ಪೋಸ್ಟ್ – ಗೋಣಿಬೀಡು – ಬೇಲೂರು – ಹಾಸನ – ಯಶವಂತುರ – ಹೆಬ್ಬಾಳ – ರಾಮಮೂರ್ತಿನಗರ – ಟಿನ್ ಫ್ಯಾಕ್ಟರಿ – ಮಹದೇವಪುರ – ವೈದೇಹಿ ಆಸ್ಪತ್ರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next