Advertisement

ಅಂಬಿ ಗರಂ: ಕ್ಷಮೆ ಕೇಳಿದ ಡಿಕೆಶಿ

06:40 AM Feb 06, 2018 | |

ಬೆಂಗಳೂರು: ಅಂಬರೀಶ್‌ಗೆ ಆರೋಗ್ಯದ ಸಮಸ್ಯೆ ಇದೆ. ಅವರು ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಮಾಜಿ ಸಚಿವ ಅಂಬರೀಶ್‌ ಗರಂ ಆಗಿದ್ದಾರೆ. ನನ್ನ ಆರೋಗ್ಯ ಹೇಗಿದೆ ಎಂದು ರಾಜ್ಯದ ಜನತೆಗೆ ಗೊತ್ತಿದೆ.ಅವರಿಗೆ ಬೇರೆ ಬೇರೆ ಸಮಸ್ಯೆಗಳಿವೆ. ಅವುಗಳನ್ನು ಸರಿಪಡಿಸಿಕೊಳ್ಳಲಿ. ನನ್ನ ಖಾಸಗಿ ವಿಷಯ ಮಾತನಾಡಬಾರದು ಎಂದು ಅಂಬರೀಶ್‌ ಖಾರವಾಗಿಯೇ ಹೇಳಿದ್ದಾರೆ.

Advertisement

ಅಂಬರೀಶ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್‌, ಅಂಬರೀಶ್‌ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಯಾರೋ ಹೇಳಿದ್ದರು ಅದಕ್ಕೆ ಪ್ರಚಾರ ಸಮಿತಿಯ ಮೊದಲ ಸಭೆ ದಿನ ಅವರು ಗೈರು ಹಾಜರಾಗಿದ್ದ ಸಂದರ್ಭದಲ್ಲಿ ಅವರ ಆರೋಗ್ಯದ ಬಗ್ಗೆ ಮಾತನಾಡಿದ್ದೆ. ನನ್ನ ಹೇಳಿಕೆಯಿಂದ ಅವರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next