Advertisement

ಅಂಬಿಗೆ ರಾಜಕೀಯ ಜನ್ಮ ನೀಡಿದ್ದು ನಾವು: ದೇವೇಗೌಡ

11:14 PM Apr 13, 2019 | Team Udayavani |

ಮದ್ದೂರು: “ಅಂಬರೀಶ್‌ ಮಾಡದೆ ಬಿಟ್ಟಿರುವ ಅರ್ಧ ಕೆಲಸವನ್ನು ತಾವು ಮುಂದುವರಿಸಲು ಬಂದಿದ್ದೇವೆ ಎನ್ನುತ್ತಿದ್ದಾರೆ. ಅದು ಯಾವುದು, ಏನು ಕೆಲಸ ಅಂತ ನನಗೆ ಅರ್ಥವಾಗುತ್ತಿಲ್ಲ’ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಟಾಂಗ್‌ ನೀಡಿದರು.

Advertisement

ಮದ್ದೂರಿನ ಕೆ.ಹೊನ್ನಲಗೆರೆಯಲ್ಲಿ ನಿಖಿಲ್‌ ಪರ ಅವರು ಚುನಾವಣಾ ಪ್ರಚಾರ ನಡೆಸಿದರು. ಅಂಬರೀಶ್‌ಗೆ ರಾಜ್‌ಕುಮಾರ್‌ಗಿಂತ ಹೆಚ್ಚಿನ ಗೌರವವನ್ನು ಕುಮಾರಣ್ಣ ಕೊಟ್ಟಿದ್ದಾರೆ. ಅದನ್ನು ಅವರು ಮರೆಯಬಾರದು. ಅಂಬರೀಶ್‌ಗೆ ರಾಜಕೀಯ ಜನ್ಮ ನೀಡಿದ್ದು ನಾವು. ಕಾವೇರಿ ನೀರಿಗಾಗಿ 25 ವರ್ಷ ಹೋರಾಟ ನಡೆಸಿದ್ದೇನೆ.

ಕಾವೇರಿ ವಿಚಾರದಲ್ಲಿ ಅನ್ಯಾಯವಾದಾಗಲೆಲ್ಲಾ ಬೀದಿಗಿಳಿದು ಹೋರಾಟ ಮಾಡಿದ್ದೇವೆ. ನನ್ನ 60 ವರ್ಷದ ರಾಜಕೀಯದಲ್ಲಿ ಸಾಕಷ್ಟು ನೋವು ಕಂಡಿದ್ದೇನೆ. ಆದರೆ, ನಿಖಿಲ್‌ ಚುನಾವಣೆಗೆ ಸ್ಪರ್ಧಿಸಿದ ಬಳಿಕ ಬಂದ ಟೀಕೆಗಳಿಂದ ಹೆಚ್ಚು ನೋವಾಗಿದೆ ಎಂದು ವಿಷಾದಿಸಿದರು. ಹಿರಿಯ ಕಾಂಗ್ರೆಸ್‌ ಮುಖಂಡ ಜಿ.ಮಾದೇಗೌಡ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next