Advertisement

ಮುನ್ಸಿಪಲ್ ಕಾಯಿದೆಗೆ ತಿದ್ದುಪಡಿ ಮಾಡಿದ ಸರ್ಕಾರ

05:10 PM Sep 16, 2022 | Team Udayavani |

ವಿಧಾನಸಭೆ: ಸ್ಥಳೀಯ ಯೋಜನಾ ಪ್ರಾಧಿಕಾರಗಳ ಅಧಿಕಾರ ವ್ಯಾಪ್ತಿಗೆ ಒಳಪಡದೆ ಇರುವ ಪ್ರದೇಶದಲ್ಲಿ ಕಟ್ಟಡ ನಕ್ಷೆಗೆ ಮಂಜೂರು ಪಡೆಯಲು ಇದ್ದ ತಾಂತ್ರಿಕ ದೋಷಗಳನ್ನು ಸರಿಪಡಿಸಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಮುನ್ಸಿಪಲ್ ಕಾಯಿದೆಗೆ ತಿದ್ದುಪಡಿ ಮಾಡಿದೆ.

Advertisement

ಕರ್ನಾಟಕ ಮುನಿಸಿಪಾಲಿಟಿ ಕಾಯಿದೆಗೆ ತಿದ್ದುಪಡಿ ಮಾಡಿ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಇ- ಸ್ವತ್ತು ನಿಯಮ ಜಾರಿಯಿಂದ ನಕ್ಷೆ ಪಡೆಯುವುದಕ್ಕೆ ಆಗುತ್ತಿದ್ದ ಅಡಚಣೆ ನಿವಾರಿಸಲು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿ ಕಾನೂನು ತಿದ್ದುಪಡಿಗೆ ನಿರ್ಧರಿಸಲಾಗಿತ್ತು.

ಇದನ್ನೂ ಓದಿ:ಜಾಗತಿಕ ಮಾರುಕಟ್ಟೆ ಎಫೆಕ್ಟ್: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ

ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಿಂದ ಗ್ರಾಮಾಂತರ ಪ್ರದೇಶ ಕಟ್ಟಡ ನಕ್ಷೆಗಳಿಗೆ ಅನುಮೋದನೆ ಪಡೆಯುವುದಕ್ಕಾಗಿ 1961ರ ಅಧಿ‌ನಿಯಮದ 4 – ಕೆ ಪ್ರಕರಣವನ್ನು ಈ ಕಾಯಿದೆ ಜಾರಿಗೆ ಬಂದ ದಿನಾಂಕದಿಂದ ಕೈ ಬಿಡುವಂತೆ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next