Advertisement

ಭಯ ಪಡಬೇಡಿ: ದಾಳಿ ವರದಿಗಳ ನಡುವೆ ವಲಸೆ ಕಾರ್ಮಿಕರಿಗೆ ತಮಿಳುನಾಡು ರಾಜ್ಯಪಾಲರ ಭರವಸೆ

02:15 PM Mar 05, 2023 | Team Udayavani |

ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ವಲಸೆ ಕಾರ್ಮಿಕರ ಮೇಲೆ ಮಾರಣಾಂತಿಕ ದಾಳಿಯ ಬಗ್ಗೆ ತಪ್ಪು ವರದಿಗಳ ಮಧ್ಯೆ, ತಮಿಳುನಾಡು ರಾಜ್ಯಪಾಲ ಆರ್‌.ಎನ್. ರವಿ ಅವರು ರಾಜ್ಯದ ವಲಸೆ ಕಾರ್ಮಿಕರಿಗೆ ಭಯಪಡಬೇಡಿ, ಸ್ಥಳೀಯ ಜನರು ಒಳ್ಳೆಯವರು ಮತ್ತು ಸ್ನೇಹಪರರು ಎಂದು ಹೇಳಿದ್ದಾರೆ.

Advertisement

ಕಾರ್ಮಿಕರು ಭಯಪಡುವ ಅಗತ್ಯವಿಲ್ಲ ಎಂದು ರಾಜಭವನವು ತಮಿಳು, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗಳಲ್ಲಿ ತಿಳಿಸಿದೆ.

ತಮಿಳುನಾಡಿನಲ್ಲಿರುವ ಉತ್ತರ ಭಾರತೀಯ ಕಾರ್ಮಿಕರು ಭಯಭೀತರಾಗಬೇಡಿ. ಯಾವುದೇ ಅಭದ್ರತೆಯನ್ನು ಅನುಭವಿಸಬೇಡಿ. ತಮಿಳುನಾಡಿನ ಜನರು ತುಂಬಾ ಒಳ್ಳೆಯವರು ಮತ್ತು ಸ್ನೇಹಪರರಾಗಿದ್ದಾರೆ. ನಿಮಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ರಾಜಭವನ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ ನಲ್ಲಿ ತಿಳಿಸಿದೆ.

ರಾಜ್ಯದ ಎಲ್ಲಾ ವಲಸೆ ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ವದಂತಿಗಳನ್ನು ಹರಡಿದ್ದಕ್ಕಾಗಿ ಹಿಂದಿ ಪತ್ರಿಕೆಯ ಇಬ್ಬರು ಪತ್ರಕರ್ತರ ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಹೇಳಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next