Advertisement

ಮಾತುಕತೆ ಮೂಲಕ ನದಿ ವಿವಾದ ಬಗಹರಿಸಿಕೊಳ್ಳಿ ಸಚಿವ ಅಮಿತ್‌ ಶಾ ಸಲಹೆ

10:27 PM Sep 03, 2022 | Team Udayavani |

ತಿರುವನಂತಪುರ: ದಕ್ಷಿಣ ಭಾರತದಲ್ಲಿ ಹೆಚ್ಚಾಗಿರುವ ಅಂತಾರಾಜ್ಯ ನದಿ ವಿವಾದಗಳನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ದಕ್ಷಿಣ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

Advertisement

ಕೇರಳ ರಾಜಧಾನಿ ತಿರುವನಂತಪುರದಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಜಲವಿವಾದ ಸಂಬಂಧ ಜಂಟಿಯಾಗಿ ಒಂದು ಪರಿಹಾರ ಸೂತ್ರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.
ಈ ಸಭೆಯಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಕೇರಳ ಸಿಎಂ ಪಿಣರಾಯಿ ವಿಜಯನ್‌, ತಮಿಳುನಾಡಿನ ಎಂ.ಕೆ.ಸ್ಟಾಲಿನ್‌ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳು ಭಾಗಿಯಾಗಿದ್ದರು.

ಸದ್ಯ ಕಾವೇರಿ ವಿಚಾರದಲ್ಲಿ ಕರ್ನಾಟಕ-ತಮಿಳುನಾಡು, ತೆಲಂಗಾಣ ಮತ್ತು ಆಂಧ್ರ ಪ್ರದೇಶ ನಡುವೆ ಕೃಷ್ಣಾ ನದಿ ನೀರಿನ ಸಮಸ್ಯೆ ಇದೆ. ಈ ಸಭೆ ಕೇಂದ್ರ ಮತ್ತು ರಾಜ್ಯಗಳ ನಡುವಿನ ತಿಕ್ಕಾಟ ಹಾಗೂ ರಾಜ್ಯಗಳ ನಡುವಿನ ಸಮಸ್ಯೆ ಬಗೆಹರಿಸಿಕೊಳ್ಳಲು ವೇದಿಕೆಯಾಗಿದೆ ಎಂದು ಶಾ ತಿಳಿಸಿದ್ದಾರೆ. ಸಭೆಯಲ್ಲಿ ಒಟ್ಟು 26 ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು ಒಂಭತ್ತನ್ನು ಬಗೆಹರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next