Advertisement
ದಾವಣಗೆರೆಯಲ್ಲಿ ಅಮಿತ್ ಶಾ ಅವರು ಬಿರು ಬಿಸಿಲಿನಲ್ಲೂ ಕರ್ನಾಟಕ ನವ ನಿರ್ಮಾಣ ಯಾತ್ರೆಯ ರಥವೇರಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯಶವಂತರಾವ್ ಜಾಧವ್ ಪರ ಸುಮಾರು 2 ಕಿಲೋ ಮೀಟರ್ ಉದ್ದಕ್ಕೂ ಮತಯಾಚಿಸಿದರು. ವೀರಮದಕರಿ(ಹೊಂಡದ) ವೃತ್ತದಿಂದ ತೆರೆದ ಬಸ್ನಲ್ಲಿ ರೋಡ್ ಶೋ ಆರಂಭಿಸಿದ ಶಾಗೆ ಸಂಸದ ಜಿ.ಎಂ. ಸಿದ್ದೇಶ್ವರ್ ಸಾಥ್ ನೀಡಿದರು. ಹಿಂದೆ ಶಾ ಜನರತ್ತ ಕೈ ಬೀಸಿ ಬರುತ್ತಿದ್ದರೆ, ಮುಂದೆ ಡೊಳ್ಳು, ಡ್ರಂ ವಾದ್ಯಗಳು ಮೊಳಗುತ್ತಿದ್ದವು. ನಂದಿಕೋಲು ಗಮನ ಸೆಳೆಯಿತು. ರಸ್ತೆಯ ಅಕ್ಕಪಕ್ಕದ ಕಟ್ಟಡಗಳ ಮೇಲೆ ನಿಂತ ಜನರು ಹೂವಿನ ಮಳೆ ಸುರಿಸುವ ಮೂಲಕ ಅಮಿತ್ ಶಾಗೆ ಭರ್ಜರಿ ಸ್ವಾಗತ ಕೋರಿದರು.
ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಮಾಜಿ ಸಚಿವ ಸೊಗಡು ಎಸ್.ಶಿವಣ್ಣ ತುಮಕೂರಿನ ರ್ಯಾಲಿಯಲ್ಲಿ ಭಾಗವಹಿಸಿರಲಿಲ್ಲ. ಆದರೆ ದಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮುಖಂಡರಿಗೆ ಜೈಕಾರ ಹಾಕುವಾಗ ಶಿವಣ್ಣನವರಿಗೂ ಜೈಕಾರ ಹಾಕುತ್ತಿದ್ದುದು ಕಂಡು ಬಂತು.
Related Articles
ದಾವಣಗೆರೆ: ಅಮಿತ್ ಶಾಗೆ ದಾವಣಗೆರೆಯಲ್ಲಿ ಮಠಾಧೀಶರ ಭೇಟಿ, ಆಶೀರ್ವಾದ ಪಡೆಯುವ ಭಾಗ್ಯ ಕೂಡಿ ಬರಲಿಲ್ಲ. ರೋಡ್ ಶೋ ಬಳಿಕ ಅಮಿತ್ ಶಾ ಅವರು ಇಲ್ಲಿನ ಹಳೆ ಪಿಬಿ ರಸ್ತೆಯಲ್ಲಿರುವ ಶ್ರೀಶೈಲ ಮಠದಲ್ಲಿ ಶ್ರೀಶೈಲ ಜಗದ್ಗುರು ಡಾ|ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವರು ಎಂಬುದಾಗಿ ಬಿಜೆಪಿ ಮೂಲಗಳು ತಿಳಿಸಿದ್ದವು. ಆದರೆ, ಅಮಿತ್ ಶಾ ಮತ್ತು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ ಭೇಟಿ ನಡೆಯಲೇ ಇಲ್ಲ. ಶ್ರೀಶೈಲ ಜಗದ್ಗುರುಗಳು ಪೂರ್ವ ನಿರ್ಧರಿತ ಕಾರ್ಯಕ್ರಮದಂತೆ ಹರಪನಹಳ್ಳಿ ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಏರ್ಪಡಿಸಿದ್ದ ಶ್ರೀ ಮಂಜುನಾಥಸ್ವಾಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ನೂತನ ಶಿಲಾಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಮಿತ್ ಶಾ ಶ್ರೀಶೈಲ ಮಠಕ್ಕೆ ಬರುವ ಬಗ್ಗೆ, ಜಗದ್ಗುರುಗಳ ಭೇಟಿ ಮಾಡುವ ಬಗ್ಗೆ ಮಠದವರಿಗೆ ಮಾಹಿತಿ ಇರಲಿಲ್ಲ ಎನ್ನಲಾಗಿದೆ.
Advertisement