Advertisement

ಪಂಚರಾಜ್ಯಗಳಲ್ಲಿ ಸೋಲು:ತುರ್ತು ಸಭೆ ಕರೆದ ಶಾ; ಬಿಎಸ್‌ವೈ ಗೈರು ? 

03:09 PM Dec 12, 2018 | |

ಹೊಸದಿಲ್ಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ  ನಾಳೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಪ್ರಭಾರಿಗಳ ತುರ್ತು ಸಭೆ ಕರೆದಿದ್ದಾರೆ. 

Advertisement

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅಧಿಕಾರ ಕಳೆದುಕೊಂಡಿರುವ ಬಗ್ಗೆ ಆತ್ಮಾವಲೋಕನವನ್ನೂ ಈ ವೇಳೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆಗೆ ರಣತಂತ್ರ ಹಣಿಯಲು ಈಗಾಗಲೇ ಕಾರ್ಯಪ್ರವೃತ್ತರಾಗಿರುವ ಶಾ ಅವರಿಗೆ ಈ ಸೋಲು ಹೊಸ ಸವಾಲನ್ನು ಎದುರಿಗಿಟ್ಟಿದೆ. 

ಬಿಎಸ್‌ವೈ ಗೈರು 

ಬೆಳಗಾವಿ ಅಧಿವೇಶನದ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ತುರ್ತು ಸಭೆಗೆ ಗೈರಾಗುತ್ತಿದ್ದಾರೆ ಎಂದು ಹೇಳಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next