Advertisement

ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆಗೆ ಶಿವಸೇನೆ ನಿರ್ಧಾರ

08:35 AM Jun 08, 2018 | Team Udayavani |

ಮುಂಬಯಿ: ಬಿಜೆಪಿ ಜತೆಗಿನ ಮೈತ್ರಿಯನ್ನು ಈಗಾಗಲೇ ಕಳೆದುಕೊಂಡಿರುವ ಶಿವಸೇನೆ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಸ್ವತಂತ್ರವಾಗಿ ಕಣಕ್ಕಿಳಿಯಲು ನಿರ್ಧರಿಸಿದೆ. ಇದು ಶಿವಸೇನೆಗೆ ಎಷ್ಟು ಸವಾಲಾಗಿರುತ್ತದೋ ಅದಕ್ಕಿಂತ ಒಂದು ಪಟ್ಟು ಹೆಚ್ಚು ಬಿಜೆಪಿಗೆ ಕಠಿನವಾಗಿ ಪರಿಣಮಿಸಲಿದೆ ಎಂದು ಹೇಳಲಾಗಿದೆ.

Advertisement

ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಭೇಟಿ ಮಾಡಿ ಬಂದ ಬೆನ್ನಲ್ಲೇ ಶಿವಸೇನೆ ಮುಖಂಡ ಸಂಜಯ್‌ ರಾವತ್‌ ಈ ಹೇಳಿಕೆ ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಎಲ್ಲ  ಕ್ಷೇತ್ರಗಳಲ್ಲಿ ಶಿವಸೇನೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದಿದ್ದಾರೆ. ಅಲ್ಲದೆ, ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲವೇ ಇಲ್ಲ ಎನ್ನುವುದನ್ನೂ ಸ್ಪಷ್ಟಪಡಿಸಿದ್ದಾರೆ. ಆದರೆ ಬುಧವಾರ ಅಮಿತ್‌ ಶಾ ಅವರು ಎರಡು ಗಂಟೆಗಳ ಕಾಲ ಸುದೀರ್ಘ‌ ಚರ್ಚೆ ನಡೆಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಠಾಕ್ರೆ-ಶಾ ಭೇಟಿ ಫ‌ಲಪ್ರದವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next