Advertisement

ಅಮಿತ್‌ ಶಾಗೆ ಕಾಮನ್‌ ಸೆನ್ಸ್‌ ಇಲ್ಲ: ದಿನೇಶ್‌ ಗುಂಡೂರಾವ್‌

06:55 AM Jan 12, 2018 | |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಗಣೇಶೋತ್ಸವಕ್ಕೆ ಸರ್ಕಾರ ಹಣ ಪಡೆಯುತ್ತಿದೆ ಎಂದು ಸುಳ್ಳು ಹೇಳುತ್ತಾರೆ. ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. 

Advertisement

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಬಿಂಬಿಸಲು ಆಧಾರ ವಿಲ್ಲದೆ ಆರೋಪ ಮಾಡುತ್ತಿದ್ದಾರೆ.

ಗಣೇಶೋತ್ಸವಕ್ಕೆ ಸರ್ಕಾರವಾಗಲಿ, ಸ್ಥಳೀಯ ಸಂಸ್ಥೆಗಳಾಗಲಿ ಯಾರಿಂದಲೂ ಹಣ ಸಂಗ್ರಹ ಮಾಡಿಲ್ಲ. ಸರ್ಕಾರ ಈಗಾಗಲೇ ಅದನ್ನು ಸ್ಪಷ್ಟಪಡಿಸಿದೆ. ಈಗ ರಾಜ್ಯ ಸರ್ಕಾರದ ವಿರುದ್ಧ ಮಾತನಾಡಲು ಯಾವುದೇ ವಿಷಯ ಇಲ್ಲದಿರು ವುದರಿಂದ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆಂದು ತಿಳಿಸಿದರು.

ಯಾವುದೇ ಆಧಾರ ಇಲ್ಲದಿರುವ ಡೈರಿ ಇಟ್ಟುಕೊಂಡು ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್‌ ಒನ್‌ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಹಣ ಪಡೆದಿರುವ ಬಗ್ಗೆ ಅಧಿಕೃತ ಮಾಹಿತಿಯೇ ಇದೆ. ಅದರ ಬಗ್ಗೆ ಅಮಿತ್‌ ಶಾ ಯಾಕೆ ಮಾತನಾಡುವುದಿಲ್ಲ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3 ಲಕ್ಷ ಕೋಟಿ ಹಣ ನೀಡಿದೆ ಎಂದು ಪದೇಪದೆ ಹೇಳುತ್ತಿದ್ದಾರೆ. ಲೆಕ್ಕ ಕೇಳಲು ಅಮಿತ್‌ ಶಾ ಯಾರು. ಇವರೇನು ಹಣಕಾಸು ಸಚಿವರೇ ಅಥವಾ ಹಣಕಾಸು ಇಲಾಖೆಯ ಕಾರ್ಯದರ್ಶಿಗಳೆ ? ಅರುಣ್‌ ಜೇಟಿÉ ಲೆಕ್ಕಾ ಕೇಳಿದರೆ ರಾಜ್ಯ ಸರ್ಕಾರ ಉತ್ತರ ಕೊಡುತ್ತದೆ ಅಮಿತ್‌ ಶಾಗೆ ಅಷ್ಟೂ ಕಾಮನ್‌ ಸೆನ್ಸ್‌ ಇಲ್ವಾ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next