Advertisement

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

12:45 AM Sep 21, 2024 | Team Udayavani |

ಗಿರಿದಿಹ್‌: ಝಾರ್ಖಂಡ್‌ನ‌ಲ್ಲಿ ಜೆಎಂಎಂ ನೇತೃತ್ವದ ಮೈತ್ರಿ ಸರಕಾರದ ಸಹಾಯದಿಂದಲೇ ರಾಜ್ಯದೊಳಗೆ ಒಳನುಸುಳುವಿಕೆ ಮಿತಿಮೀರಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಾಗ್ಧಾಳಿ ನಡೆಸಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಇದ್ದಲ್ಲಿ ಇನ್ನು 25-30 ವರ್ಷಗಳಲ್ಲಿ ಝಾರ್ಖಂಡ್‌ನ‌ಲ್ಲಿ ಈ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗ ಲಿದ್ದಾರೆ ಎಂದು ಅವರು ಎಚ್ಚರಿಸಿದರು. ಈ ಒಳನುಸುಳುಕೋರರು ಇಲ್ಲಿನ ಬುಡಕಟ್ಟು ಜನಾಂಗದ ಗುರುತು ಹಾಗೂ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸಚಿವರು, ಈ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಹಾಕುವ ಭರವಸೆಯನ್ನು ನೀಡಿದ್ದಾರೆ. ಜತೆಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಮೂರನೇ ಎರಡರಷ್ಟು ಬಹುಮತ ಪಡೆದು ಅಧಿಕಾರಕ್ಕೇರಲಿದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next