Advertisement

“Amit Shah ಗೂಂಡಾ’: ಯತೀಂದ್ರ ಹೇಳಿಕೆಗೆ ಸಿದ್ದರಾಮಯ್ಯ ಸಮರ್ಥನೆ

12:07 AM Apr 02, 2024 | Team Udayavani |

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ ಎಂದಿರುವ ಮಾಜಿ ಶಾಸಕ ಡಾ| ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ? ಸಿಬಿಐ ಹೇಳಿರುವುದನ್ನು ಯತೀಂದ್ರ ಹೇಳಿದ್ದಾನೆ ಎಂದು ಪ್ರತಿಕ್ರಿಯಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಅದು ಅವನು ಬಳಸಿರುವ ಪದ ಅಲ್ಲ. ಸಿಬಿಐ ವರದಿಯಲ್ಲಿರುವ ಪದವಾಗಿದೆ. ಸಂಸ್ಕಾರವೇ ಗೊತ್ತಿಲ್ಲದ ಬಿಜೆಪಿಯವರು ಯತೀಂದ್ರಗೆ ಸಂಸ್ಕಾರ ಹೇಳಿಕೊಡಲು ಬಂದಿದ್ದಾರೆ. ಇವರಿಂದ ನಾವು ಏನನ್ನೂ ಕಲಿಯಬೇಕಾದ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.

ಶ್ರೀನಿವಾಸ ಪ್ರಸಾದ್‌ ಜತೆ ಮಾತಾಡಿಲ್ಲ: ಸಿದ್ದರಾಮಯ್ಯ
ಮೈಸೂರು: ಸಂಸದ ವಿ. ಶ್ರೀನಿವಾಸಪ್ರಸಾದ್‌ ಜತೆ ಮಾತನಾಡಿಲ್ಲ. ಪಕ್ಷಕ್ಕೆ ಅನೇಕರು ಬರುತ್ತಾರೆ. ಯಾವ ನಾಯಕರೇ ಆಗಿದ್ದರೂ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಾ| ಎಚ್‌. ಸಿ.ಮಹದೇವಪ್ಪ, ಕೆ.ವೆಂಕಟೇಶ್‌ ಅವರು ಶ್ರೀನಿವಾಸ ಪ್ರಸಾದರನ್ನು ಭೇಟಿ ಮಾಡಿದ್ದಾರೆ. ಏನು ಹೇಳಿದ್ದಾರೆ ಅಂತ ಅವರನ್ನೇ ಕೇಳಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next