Advertisement

ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳಿಗೆ ಅಮಿತ್‌ ಶಾ ಸೂಚನೆ

07:48 PM Jul 16, 2022 | Team Udayavani |

ನವದೆಹಲಿ: ನೀರಾವರಿ, ಇತರೆ ಮೂಲಸೌಕರ್ಯ ಸೇರಿದಂತೆ ಕೃಷಿ ವಲಯಕ್ಕೆ ಹೆಚ್ಚು ಹೆಚ್ಚು ದೀರ್ಘಾವಧಿಯ ಸಾಲಗಳನ್ನು ಒದಗಿಸುವಂತೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಗೆ(ಎಆರ್‌ಡಿಬಿ) ಸಹಕಾರ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

Advertisement

ದೆಹಲಿಯಲ್ಲಿ ರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಅವರು, ಕೃಷಿ ಅಭಿವೃದ್ಧಿ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಉದ್ದೇಶದಿಂದ ಸರ್ಕಾರವು ದೇಶದ ಸಹಕಾರಿ ಸಂಘಗಳ ಡೇಟಾಬೇಸ್‌ ಅನ್ನು ಅಭಿವೃದ್ಧಿಪಡಿಸುತ್ತಿದೆ.

ಕೃಷಿ ವಲಯವನ್ನು ಸುಧಾರಿಸದೇ ರೈತರ ಆದಾಯ ಹೆಚ್ಚಿಸಲು ಸಾಧ್ಯವಿಲ್ಲ. ಹೀಗಾಗಿ, ನೀರಾವರಿ ಪ್ರದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾಲ ನೀಡಲು ಸಹಕಾರಿ ಬ್ಯಾಂಕುಗಳು ಆದ್ಯತೆ ನೀಡಬೇಕು ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next