Advertisement

ಟಿಎಂಸಿ ಸಂಸದನಿಂದ ಮಾನಹಾನಿ ದಾವೆ: ಶಾಗೆ ಕೋಲ್ಕತ ಕೋರ್ಟ್‌ ಸಮನ್ಸ್‌

03:36 PM Aug 29, 2018 | Team Udayavani |

ಕೋಲ್ಕತ : ತೃಣಮೂಲ ಕಾಂಗ್ರೆಸ್‌ ಸಂಸದ ದಾಖಲಿಸಿರುವ ಕ್ರಿಮಿನಲ್‌ ಮಾನಹಾನಿ ದಾವೆಗೆ ಸಂಬಂಧಿಸಿ ಸೆ.28ರಂದು ತನ್ನ ಮುಂದೆ ಹಾಜರಾಗುವಂತೆ ಇಲ್ಲಿನ ಮ್ಯಾಜಿಸ್ಟ್ರೇಟರ ನ್ಯಾಯಾಲಯ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ.

Advertisement

ಸಿಎಂ ಮಮತಾ ಬ್ಯಾನರ್ಜಿ ಸೋದರ ಸಂಬಂಧಿ, ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಅವರು ‘ಅಮಿತ್‌ ಶಾ ಅವರು ಸಾರ್ವಜನಿಕ ಭಾಷಣದಲ್ಲಿ ತನ್ನ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ’ ಎಂದು ಆರೋಪಿಸಿ ಕ್ರಿಮಿನನಲ್‌ ಮಾನಹಾನಿ ದಾವೆ ದಾಖಲಿಸಿದ್ದರು. 

ಕಳೆದ ಆ.13ರಂದು ಅಭಿಷೇಕ್‌ ಅವರು ಅಮಿತ್‌ ಶಾ ಗೆ ಲೀಗಲ್‌ ನೊಟೀಸ್‌ ಜಾರಿ ಮಾಡಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು. ಇಲ್ಲದಿದ್ದರೆ ತಾನು ಕ್ರಿಮಿನಲ್‌ ಮಾನಹಾನಿ ದಾವೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next