Advertisement

ಮೇ 21; ಎನ್ ಡಿಎ ಮೈತ್ರಿಕೂಟ ಮುಖಂಡರಿಗೆ ಶಾ ಔತಣಕೂಟ, ಸಮಾಲೋಚನೆ

09:13 AM May 21, 2019 | Nagendra Trasi |

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲು ದಿನಗಣನೆ ಆರಂಭವಾಗಿರುವ ನಡುವೆಯೇ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಿತ್ರಕೂಟ ಎನ್ ಡಿಎ ಸದಸ್ಯರಿಗೆ ಮೇ 21ರಂದು ಔತಣಕೂಟವನ್ನು ಏರ್ಪಡಿಸಿದ್ದಾರೆ. ಇದರಲ್ಲಿ ಕೇಂದ್ರ ಸಚಿವರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Advertisement

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಭರ್ಜರಿ ಸ್ಥಾನ ಪಡೆಯಲಿದೆ ಎಂದು ಭಾನುವಾರ ಪ್ರಕಟಗೊಂಡ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗವಾದ ಬಳಿಕ ಶಾ ಈ ಔತಣಕೂಟ ಆಯೋಜಿಸಿದ್ದಾರೆ.

ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಹಲವಾರು ಚುನಾವಣೋತ್ತರ ಸಮೀಕ್ಷೆ ಪ್ರಕಾರ ಎನ್ ಡಿಎ ಮೈತ್ರಿಕೂಟ 300ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ನ್ಯೂಸ್ 24-ಚಾಣಕ್ಯ ಸಮೀಕ್ಷೆ ಪ್ರಕಾರ ಎನ್ ಡಿಎ 350 ಸ್ಥಾನ ಗಳಿಸಲಿದೆ ಎಂದು ಹೇಳಿದೆ.

ಆಜ್ ತಕ್/ಇಂಡಿಯಾ ಟುಡೇ-ಆ್ಯಕ್ಸಿಸ್ 339ರಿಂದ 365, ನ್ಯೂಸ್ 18-ಐಪಿಎಸ್ ಒಎಸ್ 336, ಟೈಮ್ಸ್ ನೌ-ವಿಎಂಆರ್ 306, ರಿಪಬ್ಲಿಕ್- ಜನ್ ಕೀ ಬಾತ್ 315 ಹಾಗೂ ಇಂಡಿಯಾ ಟಿವಿ-ಸಿಎನ್ ಎಕ್ಸ್ 315 ಸ್ಥಾನ ಗಳಿಸುವುದಾಗಿ ಸಮೀಕ್ಷೆಯಲ್ಲಿ ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next