Advertisement

15 ಅಡಿ ಎತ್ತರದ ಜೆಪಿ ಪ್ರತಿಮೆ ಲೋಕಾರ್ಪಣೆ; ನಿತೀಶ್‌,ಮಹಾಘಟಬಂಧನ್‌ ವಿರುದ್ಧ ಶಾ ಟೀಕಾಪ್ರಹಾರ

10:29 PM Oct 11, 2022 | Team Udayavani |

ಪಾಟ್ನಾ:ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಹಾರದ ಸಾರನ್‌ ಜಿಲ್ಲೆಯಲ್ಲಿ ಸಮಾಜವಾದಿ ನಾಯಕ, ತುರ್ತು ಪರಿಸ್ಥಿತಿ ವಿರೋಧಿ ಹೋರಾಟಗಾರ ಜಯಪ್ರಕಾಶ್‌ ನಾರಾಯಣ್‌ ಅವರ 15 ಅಡಿ ಎತ್ತರದ ಪ್ರತಿಮೆಯನ್ನು ಮಂಗಳವಾರ ಲೋಕಾರ್ಪಣೆ ಮಾಡಿದ್ದಾರೆ.

Advertisement

ನಂತರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಶಾ, “ಜೆಪಿ ಅವರ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿರುವ ಅನೇಕರು ಈಗ ಅಧಿಕಾರಕ್ಕಾಗಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದಾರೆ.

ಜೆಪಿ ಸಿದ್ಧಾಂತಕ್ಕಾಗಿ ಹೋರಾಡಿದವರು, ಅಧಿಕಾರಕ್ಕಾಗಿ ಅಲ್ಲ. ಆದರೆ, ಅವರ ಹೆಸರು ಬಳಸಿಕೊಂಡು ರಾಜಕೀಯ ಮಾಡುತ್ತಿರುವವರು ಅಧಿಕಾರಕ್ಕಾಗಿ 5 ಬಾರಿ ಪಕ್ಷ ಬದಲಾಯಿಸಿದರು ಮತ್ತು ಈಗ ಕಾಂಗ್ರೆಸ್‌ನ ಮಡಿಲಲ್ಲಿ ಕುಳಿತರು’ ಎಂದು ಸಿಎಂ ನಿತೀಶ್‌ ಕುಮಾರ್‌ ಹಾಗೂ ಮಹಾಘಟಬಂಧನ್‌ ಸರ್ಕಾರವನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next