Advertisement

ಗೃಹ ಸಚಿವ ಶಾ ಕಾಶ್ಮೀರ ಭೇಟಿಗೂ ಮುನ್ನ ಪುಲ್ವಾಮಾದಲ್ಲಿ ಗುಂಡಿನ ಕಾಳಗ

09:01 AM Jun 27, 2019 | Team Udayavani |

ಶ್ರೀನಗರ: ಪುಲ್ವಾಮಾದಲ್ಲಿ ಉಗ್ರರೊಂದಿಗೆ ಭದ್ರತಾ ಪಡೆಗಳು ಬುಧವಾರ ನಸುಕಿನ ವೇಳೆ ಭಾರೀ ಗುಂಡಿನ ಕಾಳಗ ಆರಂಭಿಸಿವೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಜಮ್ಮು-ಕಾಶ್ಮೀರಕ್ಕೆ ಭೇಟಿ
ನೀಡುವ ಮುನ್ನ ಈ ಕಾರ್ಯಾಚರಣೆ ಆರಂಭವಾಗಿದೆ.

Advertisement

ತ್ರಾಲ್‌ ಪ್ರದೇಶದಲ್ಲಿ ಮೂರರಿಂದ ನಾಲ್ಕು ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿದಿರುವ ಬಗ್ಗೆ ಸೇನಾ ಮೂಲಗಳು ತಿಳಿಸಿವೆ.ಓರ್ವ ಉಗ್ರನನ್ನು ಹತ್ಯೆಗೈಯಲಾಗಿರುವ ಬಗ್ಗೆ ವರದಿಯಾಗಿದೆ.

ಜು.1ರಿಂದ ಅಮರನಾಥಯಾತ್ರೆ ಆರಂಭವಾಗುವ ಹಿನ್ನಲೆಯಲ್ಲಿ ಬುಧವಾರ ಅಮಿತ್‌ ಶಾ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಭದ್ರತಾ ವ್ಯವಸ್ಥೆ ಪರಿಶೀಲಿಸಿ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ .

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹದ್ದಿನ ಕಣ್ಣಿಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next