Advertisement

ಏ.2,3 ರಂದು ಅಮಿತ್‌ ಶಾ ಮುಂಬೈ ಕರ್ನಾಟಕ ಪ್ರವಾಸ

06:45 AM Apr 01, 2018 | Team Udayavani |

ಬೆಂಗಳೂರು: ಮೈಸೂರು, ಚಾಮರಾಜನಗರ, ಮಂಡ್ಯ ಪ್ರವಾಸ ಮುಗಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಏಪ್ರಿಲ್‌ 2 ಮತ್ತು 3 ರಂದು ಮುಂಬೈ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

Advertisement

ಈ ಪ್ರವಾಸ ಸಂದರ್ಭದಲ್ಲಿ ಬಾದಾಯಿ ಶಿವಯೋಗಿ ಮಂದಿರಕ್ಕೆ ಭೇಟಿ ನೀಡಲಿರುವ ಅಮಿತ್‌ ಶಾ ಶಿವಯೋಗಿ ಸ್ವಾಮೀಜಿಯವರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ಏಪ್ರಿಲ್‌ 2 ರಂದು ಬೆಳಗಾವಿಯ ಕಿತ್ತೂರಿನಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಅಮಿತ್‌ ಶಾ ನಂತರ ನಂದಗಡದ ಸಂಗೋಳ್ಳಿ ರಾಯಣ್ಣ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಗಾವಿ ಕೆಎಲ್‌ಇ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ, ಚಕ್ಕೋಡಿಯ ಡಿಕೆ ಕಾಲೇಜಿನಲ್ಲಿ ಸಮಾಜ ಚಿಂತನಾ ಸಭೆ,  ನಿಪ್ಪಾಣಿಯ ಮುನ್ಸಿಪಲ್‌ ಮೈದಾನದಲ್ಲಿ ಮಹಿಳಾ ಸಮಾವೇಶದಲ್ಲಿ ಭಾಗಿಯಾಗಿ ಗೋಕಾಕ್‌ನಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

ಏ.3 ರಂದು ಬಾಗಲಕೋಟೆ ಬಿವಿವಿಎಸ್‌ ಕ್ಯಾಂಪಸ್‌ ಸಭಾಂಗಣದಲ್ಲಿ ಉದ್ಯಮಿಗಳ ಜತೆ ಸಂವಾದ, ಮುಧೋಳದ ವೀರಶೈವ ಕಲ್ಯಾಣ ಮಂಟಪದಲ್ಲಿ ಐದು ಜಿಲ್ಲೆಗಳ ಶಕ್ತಿಕೇಂದ್ರ ಪ್ರಮುಖ್‌ ಸಮಾವೇಶ, ಬಾದಾಮಿಯಲ್ಲಿ ಶಿವಯೋಗಿ ಶ್ರೀಗಳ ಜತೆ ಸಮಾಲೋಚನೆ, ಬ್ಯಾಡಗಿಯ ಕನಕ ಸಮುದಾಯ ಭವನದಲ್ಲಿ ಹಿಂದುಳಿದ ವರ್ಗ ಸಮುದಾಯದ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next