Advertisement
ರಾಜ್ಯ ನಾಯಕರ ಆಪರೇಷನ್ ಕಮಲ ಕಾರ್ಯಾಚರಣೆ ಯಶಸ್ವಿಯಾಗುವ ಬಗ್ಗೆ ಅಮಿತ್ ಶಾಗೆ ಸಂಪೂರ್ಣ ನಂಬಿಕೆ ಹುಟ್ಟುತ್ತಿಲ್ಲ. ಹೀಗಾಗಿ, ಬಿಜೆಪಿಗೆ ಸೇರ್ಪಡೆ ಅಥವಾ ಬೆಂಬಲ ಸೂಚಿಸಲು ಸಿದ್ಧವಿರುವ ಅತೃಪ್ತ ಜೆಡಿಎಸ್-ಕಾಂಗ್ರೆಸ್ ಶಾಸಕರ ಪಟ್ಟಿ ನೀಡುವಂತೆ ಸೂಚನೆ ನೀಡಲಾಗಿದೆ.
Related Articles
Advertisement
ಕಾಂಗ್ರೆಸ್-ಜೆಡಿಎಸ್ ಮೈತ್ರಿಯಡಿ ಲೋಕಸಭೆ ಚುನಾವಣೆಗೆ ಹೋಗುವುದರಿಂದ ಎರಡೂ ಪಕ್ಷಗಳಲ್ಲಿ ಅತೃಪ್ತಗೊಂಡವರು ಬಿಜೆಪಿ ಸೇರಬಹುದು. ಅದರಿಂದ ಪಕ್ಷ ಬಲಿಷ್ಠವಾಗುತ್ತದೆ ಎಂಬ ಲೆಕ್ಕಾಚಾರವೂ ಇದೆ ಎನ್ನಲಾಗಿದೆ.
ಪಟ್ಟಿ ಸಲ್ಲಿಕೆಈ ಮಧ್ಯೆ,ಲೋಕಸಭೆ ಮೈತ್ರಿ ವಿರೋಧಿಸಿ ಬಿಜೆಪಿಗೆ ಬರುತ್ತಿರುವವರ ಪಟ್ಟಿ ಸಹ ಅಮಿತ್ ಶಾ ಅವರಿಗೆ ಸಲ್ಲಿಸಲಾಗಿದ್ದು,ಅದರಲ್ಲಿ ಮಾಜಿ ಸಚಿವರಾದ ಎ.ಮಂಜು, ಚೆಲುವರಾಯಸ್ವಾಮಿ,ಮಾಜಿ ಶಾಸಕರಾದ ಎಚ್.ಸಿ.ಬಾಲಕೃಷ್ಣ, ಕೆ.ಎನ್.ರಾಜಣ್ಣ, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರ ಹೆಸರು ಇದೆ. ಎಚ್.ಸಿ.ಬಾಲಕೃಷ್ಣ ಅಥವಾ ಪುಟ್ಟಣ್ಣ ಅವರನ್ನು ಬಿಜೆಪಿಗೆ ಕರೆತಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಕಣಕ್ಕಿಳಿಸುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಹೇಳಲಾಗಿದೆ. ಸಮ್ಮಿಶ್ರ ಸರ್ಕಾರ ಉರುಳಿಸಲು ನಾವು ಪ್ರಯತ್ನಿಸುತ್ತಿಲ್ಲ.ಆಪರೇಷನ್ ಕಮಲ ಅಗತ್ಯವಿಲ್ಲ. ದಿನೇಶ್ಗುಂಡೂರಾವ್, ಡಿ.ಕೆ.ಶಿವಕುಮಾರ್ ಆರೋಪದಲ್ಲಿ ಹುರುಳಿಲ್ಲ. ಈ ಸರ್ಕಾರ ತನ್ನಿಂತಾನೆ ಬೀಳುತ್ತದೆ, ನಾವು ಬೀಳಿಸುವ ಅಗತ್ಯವಿಲ್ಲ. ಪ್ರತಿಪಕ್ಷವಾಗಿ ನಮ್ಮ ಕೆಲಸ ನಾವು ಮಾಡುತ್ತೇವೆ. ತುರ್ತು ಸಭೆ ನಿಮಿತ್ತ ದೆಹಲಿಗೆ ಹೋಗಿದ್ದೆ.
– ಬಿ.ಎಸ್.ಯಡಿಯೂರಪ್ಪ – ಎಸ್. ಲಕ್ಷ್ಮಿನಾರಾಯಣ